ಬೇಡಿಕೆ ಈಡೇರಿಸದಿದ್ದರೆ ಮುಸ್ಲಿಂರಿಂದ ಉಗ್ರ ಹೋರಾಟ

ಪಟ್ಟಣದಲ್ಲಿ ಅಂಜುಮಾನ್ ಶಾದಿಮಹಲ್ದಿಂದ ಕರ್ನಾಟಕ ಮುಸ್ಲಿಂ ಹೋರಾಟ ಸಮಿತಿಯ ಜಿಲ್ಲಾ ಉಪಾಧ್ಯಕ್ಷ ಅಬ್ದುಲ್ ರಜಾಕ್ ಕಿಲ್ಲೇದಾರ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಿತು. ಮುಸ್ಲಿಂರಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಬೇಕೆಂದು ಕೇಂದ್ರ ಮತ್ತು ರಾಜ್ಯ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಪಟ್ಟಣದ ಬಸ್ ನಿಲ್ದಾಣ ರೋಡ, ಶುಕ್ರವಾರ ಪ್ಯಾಟಿ, ಮಾರ್ಕೇಟ್ ರಸ್ತೆ ಮೂಲಕ ಕಂದಾಯ ಇಲಾಖೆ ಆವರಣವನ್ನು ಪ್ರವೇಶಿಸಿ, ಉಪ ವಿಭಾಗಾಧಿಕಾರಿಗಳ ಮೂಲಕ ಪ್ರಧಾನ ಮಂತ್ರಿ, ರಾಜ್ಯಪಾಲರಿಗೆ ಹಾಗೂ ಮುಖ್ಯಮಂತ್ರಿಗಳಿಗೆ ಮನವಿ ಅರ್ಪಿಸಿದರು.
ಈ ಸಂದರ್ಭದಲ್ಲಿ ಮನವಿ ಪತ್ರವನ್ನು ಓದಿದ ಸಮಾಜದ ಮುಖಂಡ ಎಲ್.ಎಸ್.ಬಸೀರ ಅಹ್ಮದ, ಮುಸ್ಲಿಂ ಸಮಾಜಕ್ಕೆ ಅವಶ್ಯವಿರುವ ಬೇಡಿಕೆಗಳಿಗೆ 15 ದಿನಗಳ ಒಳಗಾಗಿ ಸ್ಪಂದಿಸದಿದ್ದಲ್ಲಿ ಕರ್ನಾಟಕ ರಾಜ್ಯಾದ್ಯಂತ ಉಗ್ರ ಹೋರಾಟ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು. ರಾಜ್ಯ ಸರಕಾರ ಕನಕದಾಸರ, ಮಹರ್ಷಿ ವಾಲ್ಮೀಕಿ ಜಯಂತಿ ಮಾದರಿಯಲ್ಲಿ ಟೀಪು ಸುಲ್ತಾನರ ಜನ್ಮ ದಿನದಂದು ಸರಕಾರಿ ರಜೆ ಘೋಷಿಸಬೇಕು. ಅವರ ಹೆಸರಿನಲ್ಲಿ ಅಭಿವೃದ್ಧಿ ಪ್ರಾಧಿಕಾರ ರಚಿಸಬೇಕು ಎಂದು ಒತ್ತಾಯಿಸಿದರು.
ಮೀಸಲಾತಿ ಮುಸ್ಲಿಂ ಜನಾಂಗಕ್ಕೆ ಇರುವ ಕಾನೂನು ಬದ್ಧ ಹಕ್ಕು ಅನ್ನುವದನ್ನು ಮರೆಯದೆ ಆರ್ಥಿಕ, ಶೈಕ್ಷಣಿಕ, ರಾಜಕೀಯ ಹಕ್ಕನ್ನು ಎಲ್ಲ ರಾಜಕೀಯ ಪಕ್ಷಗಳು ಸರಕಾರಗಳ ಮೇಲೆ ಒತ್ತಡ ತಂದ ಸಾಚಾರ ವರದಿ ಹಾಗೂ ಪ್ರತ್ಯೇಕ ಮುಸ್ಲಿಂ ಮೀಸಲಾತಿ ಜಾರಿಗೆ ತರಲು ಒತ್ತಾಯಿಸಬೇಕು. ಸರಕಾರಿ ಮತ್ತು ಅರೇ ಸರಕಾರಿ ನೌಕರಿಯಲ್ಲಿ ಇರುವ ಮುಸ್ಲಿಂ ಜನಾಂಗದ ನೌಕರದಾರರಿಗೆ ಮೀಸಲಾತಿ ಒದಗಿಸಿ ಅವರಿಗೆ ಬಡ್ತಿ ಕಲ್ಪಿಸಬೇಕು ಎಂದರು.
ಸರಕಾರಿ ಹಾಗೂ ಖಾಸಗಿ ಕಂಪನಿಗಳಲ್ಲಿ, ಅನುದಾನಿತ ಶಿಕ್ಷಣ-ಸಂಸ್ಥೆಗಳಲ್ಲಿ ಮುಸ್ಲಿಂರಿಗೆ ಪ್ರತ್ಯೇಕ ಮೀಸಲಾತಿ ಜೊತೆಗೆ ಉದ್ಯೋಗ ನೀಡಿ, ನಿರುದ್ಯೋಗ ಸಮಸ್ಯೆಯನ್ನು ತೊಲಗಿಸಬೇಕು. ಮತ್ತು ಈ ಸರಕಾರದ ವಿವಿಧ ಯೋಜನೆಗಳಲ್ಲಿ ಕಾಮಗಾರಿಗಳಿಗೆ ಟೆಂಡರ್ ಮಾಡುವಾಗ ಗುತ್ತಿಗೆ ಆದಾರದಲ್ಲಿ ಕೆಲಸ ಮಾಡಲು ಪ್ರತ್ಯೇಕ ಮೀಸಲಾತಿ ನೀಡಬೇಕು. ಮಹಿಳಾ ನೌಕರದಾರರಿಗೆ ನೌಕರಿಯಲ್ಲಿ ಬಹಳ ತೊಂದರೆಯಾಗುತ್ತಿದ್ದು, ಅವರಿಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications