ಗುಲಬರ್ಗ ಉರ್ದು ಪಾಲಿಕೆಗೆ ಕರವೇ ಮುತ್ತಿಗೆ

ಶುಕ್ರವಾರ ಸಂಜೆ ಗುಲಬರ್ಗ ಪಾಲಿಕೆಗೆ ಕರವೇ ಕಾರ್ಯಕರ್ತರು ಮುತ್ತಿಗೆ ಹಾಕಿ, ಪಾಲಿಕೆ ಸದಸ್ಯರನ್ನು ತರಾಟೆಗೆ ತೆಗೆದುಕೊಳ್ಳಲು ತೀರ್ಮಾನಿಸಿದ್ದಾರೆ. ಬೆಂಗಳೂರು ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ವೃತ್ತದಲ್ಲಿ ಶನಿವಾರ ಬೆಳಿಗ್ಗೆ 11 ಗಂಟೆಗೆ ಭೂತದಹನ ಮಾಡಲು ಕರವೇ ಕಾರ್ಯಕರ್ತರು ಸಿದ್ಧತೆ ನಡೆಸಿದ್ದಾರೆ.
ಈ ಕುರಿತು ಒನ್ಇಂಡಿಯಾ-ಕನ್ನಡದೊಡನೆ ಮಾತನಾಡಿದ ಕರವೇ ನೂತನ ಪ್ರಧಾನ ಕಾರ್ಯದರ್ಶಿ ಸಣ್ಣೀರಪ್ಪ ಅವರು, ಕರ್ನಾಟಕದಲ್ಲಿ ಕನ್ನಡ ಮತ್ತು ಉರ್ದು ಅಣ್ಣತಮ್ಮಂದಿರಂತೆ ಇವೆ. ಆದರೆ, ಈ ಎಡಬಿಡಂಗಿ ಗುಲಬರ್ಗ ಸದಸ್ಯರು ಇಂತಹ ನಿರ್ಣಯಗಳನ್ನು ತೆಗೆದುಕೊಂಡು ಉರ್ದು ಭಾಷಿಕರನ್ನು ಎತ್ತಿಕಟ್ಟುವ ಹುನ್ನಾರ ನಡೆಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇಂತಹ ನಿರ್ಣಯಗಳನ್ನು ತೆಗೆದುಕೊಂಡಾಗ ಪಾಲಿಕೆಯಲ್ಲಿದ್ದ ಕನ್ನಡಿಗರು ಯಾವುದೇ ಚಕಾರವೆತ್ತದಿರುವುದು ಅಕ್ಷಮ್ಯ ಅಪರಾಧ. ಅಲ್ಲದೆ, ಇದರ ವಿರುದ್ಧ ಇತರ ಕನ್ನಡ ಸಂಘಟನೆಗಳು ಬಾಯಿಮುಚ್ಚಿಕೊಂಡು ಇರುವುದು ಆಶ್ಚರ್ಯದ ಜೊತೆಗೆ ಆಘಾತ ತಂದಿದೆ ಎಂದು ಸಣ್ಣೀರಪ್ಪ ಮಾತಿನಲ್ಲಿಯೇ ಕುದಿಯುತ್ತಿದ್ದರು.
ಕರ್ನಾಟಕದಲ್ಲಿ ಹಿಂದಿ ಹಾಡುಗಳನ್ನು ಎಲ್ಲರೂ ಕೇಳುತ್ತಾರೆ. ಸಂಗೀತಕ್ಕೆ ಯಾವುದೇ ಎಲ್ಲೆ ಇರುವುದಿಲ್ಲ. ಗುಲಬರ್ಗದಲ್ಲಿ ಉರ್ದು ಭಾಷೆ ಹೆಚ್ಚಾಗಿ ಬಳಸಲಾಗುತ್ತಿದೆ ಎಂಬುದು ಎಲ್ಲರಿಗೂ ತಿಳಿದ ವಿಚಾರ. ಹಾಗಂತ ರಫಿ ಜನ್ಮದಿನವನ್ನು ಪಾಲಿಕೆ ವೆಚ್ಚದಲ್ಲಿ ಆಚರಿಸುವುದು ಯಾವ ನ್ಯಾಯ ಎಂದು ಸಣ್ಣೀರಪ್ಪ ಸಣ್ಣಗೆ ಗುಡುಗಿದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications