ಕೊಲ್ಹಾಪುರದಲ್ಲಿ 5 ಕರ್ನಾಟಕ ಬಸ್ಸುಗಳಿಗೆ ಕಲ್ಲೇಟು

Stone pelting in Kolhapur : 5 KSRTC buses damaged
ಕೊಲ್ಹಾಪುರ, ಡಿ. 16 : ಬೆಳಗಾವಿ ಮಹಾನಗರ ಪಾಲಿಕೆಯನ್ನು ಸೂಪರ್‌ಸೀಡ್ ಮಾಡಲು ಕರ್ನಾಟಕ ನಿರ್ಧರಿಸಿದ್ದಕ್ಕೆ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಮತ್ತು ಮಹಾರಾಷ್ಟ್ರದ ಅನೇಕ ಕಡೆಗಳಲ್ಲಿ ಭಾರೀ ವಿರೋಧ ವ್ಯಕ್ತವಾಗಿದೆ. ಸೂಪರ್‌ಸೀಡ್ ಮಾಡಿರುವುದು ಅಸಂವಿಧಾನಿಕ ಎಂದು ಮಹಾರಾಷ್ಟ್ರ ಸರಕಾರ ಹೇಳಿದೆ.

ಮಹಾರಾಷ್ಟ್ರ ನವನಿರ್ಮಾಣ ಸೇನೆ ಮಹಾರಾಷ್ಟ್ರ ರಾಜ್ಯಾದ್ಯಂತ ಪ್ರತಿಭಟನೆಗಳನ್ನು ನಡೆಸುತ್ತಿದೆ. ಕನ್ನಡಿಗರು ಹೆಚ್ಚಾಗಿರುವ ಕೊಲ್ಹಾಪುರದಲ್ಲಿ ಕರ್ನಾಟಕದ 5 ಸರಕಾರಿ ಬಸ್ಸುಗಳ ಮೇಲೆ ಕಲ್ಲು ತೂರಾಟ ಮಾಡಲಾಗಿದೆ. ಕಲ್ಲು ತೂರಾಟದಲ್ಲಿ ಬಸ್ಸುಗಳು ಜಖಂ ಆಗಿವೆಯಾದರೂ ಯಾರೂ ಗಾಯಗೊಂಡ ವರದಿ ಬಂದಿಲ್ಲ.

ಕನ್ನಡಿಗರನ್ನು ಕಡೆಗಣಿಸಿ, ಕನ್ನಡ ನಾಡು ನುಡಿಗೆ ಅವಮಾನ ಮಾಡಿದ ಆರೋಪದ ಮೇಲೆ ಮಹಾರಾಷ್ಟ್ರ ಏಕೀಕರಣ ಸಮಿತಿ ಅಧಿಕಾರದಲ್ಲಿದ್ದ ಬೆಳಗಾವಿ ಮಹಾನಗರ ಪಾಲಿಕೆಯನ್ನು ಸೂಪರ್ ಸೀಡ್ ಮಾಡಲು ಕರ್ನಾಟಕ ಗುರುವಾರ ಚಳಿಗಾಲದ ಅಧಿವೇಶನದಲ್ಲಿ ನಿರ್ಧರಿಸಿತು. ಇದರಿಂದ ಕನ್ನಡ ಮರಾಠಿ ಭಾಷಾ ಕಲಹ ಮತ್ತೆ ತಾರಕ್ಕೇರಿದೆ.

ಈ ನಿರ್ಧಾರದಿಂದ ಅಸಮಾಧಾನಗೊಂಡಿರುವ ಎಂಇಎಸ್ ಕಾರ್ಯಕರ್ತರು ಶುಕ್ರವಾರ ಜಿಲ್ಲಾಧಿಕಾರಿ ಏಕರೂಪ್ ಕೌರ್ ಅವರನ್ನು ಭೇಟಿ ಮಾಡಿ, ಕರ್ನಾಟಕದಲ್ಲಿ ಆಪತ್ತಿನಲ್ಲಿರುವ ಮರಾಠಿಗರನ್ನು ರಕ್ಷಿಸಬೇಕು ಎಂದು ಕೋರಿ ಜಿಲ್ಲಾಧಿಕಾರಿಗಳ ಮುಖಾಂತರ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+