ಬೆಳಗಾವಿ ಕೇಂದ್ರಾಡಳಿತ ಪ್ರದೇಶ ಮಾಡಿ: ರಾಷ್ಟ್ರಪತಿ ಪ್ರತಿಭಾಗೆ ಮನವಿ

ಗಡಿ ವಿವಾದ ಸುಪ್ರೀಂಕೋರ್ಟಿನಲ್ಲಿದ್ದು, ನ್ಯಾಯಾಲಯದ ಅಂತಿಮ ತೀರ್ಪು ಪ್ರಕಟವಾಗುವವರೆಗೆ ಬೆಳಗಾವಿಯನ್ನು ಕೇಂದ್ರಾಡಳಿತಕ್ಕೆ ಒಳಪಡಿಸಿ ಎಂದು ಮುಂಬೈನ ರಾಜಭವನದಲ್ಲಿ ಪ್ರತಿಭಾ ಪಾಟೀಲ್ ಅವರನ್ನು ಮಂಗಳವಾರ ಉದ್ಧವ್ ಠಾಕ್ರೆ ಭೇಟಿ ಮಾಡಿ ಈ ಮನವಿ ಸಲ್ಲಿಸಿದರು.
ಬೆಳಗಾವಿಯಲ್ಲಿ ತುರ್ತು ಪರಿಸ್ಥಿತಿಯಂತಹ ವಾತಾವರಣ ಇದೆ. ಮರಾಠಿ ಜನರ ಮೇಲಿರುವ ಹಗೆತನದಿಂದ ಕರ್ನಾಟಕ ಸರ್ಕಾರವು ಬೆಳಗಾವಿ ಮಹಾನಗರ ಪಾಲಿಕೆಯನ್ನು ವಿಸರ್ಜಿಸಿದೆ ಎಂದು ಉದ್ಧವ್ ಠಾಕ್ರೆ ರಾಷ್ಟ್ರಪತಿ ಬಳಿ ದೂರಿದರು.
'ಈ ವಿಚಾರದ ಕುರಿತು ನೀವು ಮಧ್ಯಪ್ರವೇಶಿಸಬೇಕು. ಬೆಳಗಾವಿ ಮತ್ತು ಕರ್ನಾಟಕದಲ್ಲಿ ಮರಾಠಿ ಭಾಷಿಗರು ನೆಲೆಸಿರುವ ಇತರ ಪ್ರದೇಶಗಳನ್ನು ಕೇಂದ್ರಾಡಳಿತ ಪ್ರದೇಶ ಎಂದು ಘೋಷಿಸುವಂತೆ ನೀವು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕು' ಎಂದು ಉದ್ಧವ್ ಠಾಕ್ರೆ ಪಾಟೀಲ್ ಅವರಲ್ಲಿ ಕೋರಿದರು.
'ಬೆಳಗಾವಿ ಮತ್ತು ಇತರ ಪ್ರದೇಶಗಳಲ್ಲಿರುವ ಮರಾಠಿ ಜನರಿಗೆ ಅನ್ಯಾಯ ಮಾಡಲಾಗುತ್ತಿದೆ. ತಮ್ಮ ನೋವುಗಳನ್ನು ಪರಿಹರಿಸಿಕೊಳ್ಳಲು ಯತ್ನಿಸುತ್ತಿರುವ ಮರಾಠಿಗರ ವಿರುದ್ಧ ಕರ್ನಾಟಕ ಸರ್ಕಾರ ಲಾಠಿ ಮತ್ತು ಗುಂಡುಗಳನ್ನು ಬಳಸುತ್ತಿದೆ' ಎಂದು ಆರೋಪಿಸಿದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications