ನಿಡುಮಾಮಿಡಿ ಶ್ರೀಗಳಿಗೆ ಪೇಜಾವರರ ಪಂಥಾಹ್ವಾನ

ದಲಿತ ಮತ್ತು ಕೊಳಚೆ ಪ್ರದೇಶಗಳಲ್ಲಿ ಪಾದಯಾತ್ರೆ ನಡೆಸಿ ಮಾಧ್ಯಮದವರೊಂದಿಗೆ ಮಾತನಾಡುತ್ತಾ ಪೇಜಾವರ ಶ್ರೀಗಳು, ನಿಡುಮಾಮಿಡಿ ಶ್ರೀಗಳಿಗೆ ಟೀಕೆ ಮಾಡುವುದೊಂದೇ ಕಸುಬು ಮತ್ತು ಅದನ್ನೇ ರೂಢಿಸಿಕೊಂಡಿದ್ದಾರೆ. ಕುಕ್ಕೇ ಮತ್ತು ಉಡುಪಿಯಲ್ಲಿ ನಡೆಯುವ ಮಡೆಸ್ನಾನ ನಿಲ್ಲಿಸಲು ನನ್ನ ವಿರೋಧವೇನೂ ಇಲ್ಲ ಎಂದು ಈಗಾಗಲೇ ಸ್ಪಷ್ಟ ಪಡಿಸಿದ್ದೇನೆ ಎಂದು ಕಿಡಿಕಾರಿದ್ದಾರೆ.
ಮಡೆಸ್ನಾನದ ವಿಚಾರದಲ್ಲಿ ನನ್ನ ನಿಲುವನ್ನು ಈಗಾಗಲೇ ಜನತೆಗೆ ತಿಳಿಸಿದ್ದೇನೆ, ಆದರೂ ಕೆಲವರು ನನ್ನ ಹೆಸರನ್ನು ವಿನಾಕಾರಣ ತರುತ್ತಿದ್ದಾರೆ. ಕುಕ್ಕೇ ಸುಬ್ರಮಣ್ಯ ಕ್ಷೇತ್ರ ನನ್ನ ಮಠದ ವ್ಯಾಪ್ತಿಯಲ್ಲಿಲ್ಲ ಎನ್ನುವುದು ಟೀಕೆ ಮಾಡುವವರಿಗೆ ತಿಳಿಯಲಿ. ಆ ದೇವಾಲಯ ಮುಜರಾಯಿ ಇಲಾಖೆಗೆ ಒಳಪಟ್ಟಿದ್ದು, ಸರ್ಕಾರ ಒತ್ತಡಕ್ಕೆ ಮಣಿದು ಈ ಸಂಬಂಧ ಸೂಕ್ತ ಕ್ರಮ ಕೈಗೊಳ್ಳಲಿ. ಇದಕ್ಕೆ ನನ್ನ ವಿರೋಧವಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.
ಮಡೆಸ್ನಾನವನ್ನು ವಿರೋಧಿಸುದಿಲ್ಲ, ಸಮರ್ಥಿಸಿ ಕೊಳ್ಳುವುದೂ ಇಲ್ಲ ಅದೊಂದು ಭಕ್ತರ ನಂಬಿಕೆ ಎನ್ನುವ ಪೇಜಾವರ ಶ್ರೀಗಳ ಹೇಳಿಕೆ ಹಾಸ್ಯಾಸ್ಪದ. ಇದು ಪೇಜಾವರರ ದ್ವಂದ್ವ ನಿಲುವು ಹಾಗಾಗಿ ಅವರನ್ನು 'ಶ್ರೀ ದ್ವಂದ್ವಾಚಾರ್ಯ" ಎಂದು ಕರೆಯಬಹುದು ಎಂದು ನಿಡುಮಾಮಿಡಿ ಮಹಾ ಸಂಸ್ಥಾನ ಮಠದ ಶ್ರೀ ವೀರಭದ್ರ ಚನ್ನಮಲ್ಲ ಸ್ವಾಮಿಗಳು ಪೇಜಾವರ ಶ್ರೀಗಳನ್ನು ತೀವ್ರವಾಗಿ ಲೇವಡಿ ಮಾಡಿದ್ದರು.
-
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ -
ರಾಜ್ಯದಲ್ಲಿ ಕಮರ್ಷಿಯಲ್ ಉದ್ದೇಶಕ್ಕೆ ಗೃಹಬಳಕೆ LPG ಸಿಲಿಂಡರ್ ಬಳಸಿದವರ ಮೇಲೆ ಅಧಿಕಾರಿಗಳ ಖಡಕ್ ದಾಳಿ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ












Click it and Unblock the Notifications