ಸಾರೆಕೊಪ್ಪ ಬಂಗಾರಪ್ಪ ಜೀವನ ಅವಲೋಕನ

ಶಿವಮೊಗ್ಗದಲ್ಲಿ ವಕೀಲ ವೃತ್ತಿ ಆರಂಭಿಸಿದ ಬಂಗಾರಪ್ಪನವರು ಮೂಲತಃ ಲೋಹಿಯಾ ಚಿಂತಕರು, ಸಮಾಜವಾದಿ ತತ್ವವದಡಿ ಸಾಮಾಜಮುಖಿ ಚಿಂತನೆಯೊಂದಿಗೆ ಬಾಳಲು ಯತ್ನಿಸಿದ ಹಠವಾದಿ, ಸ್ವಾಭಿಮಾನಿ.
* 1967 ರಲ್ಲಿ ಮೊದಲ ಬಾರಿಗೆ ಸೊರಬ ಕ್ಷೇತ್ರಕ್ಕೆ ಸಂಯುಕ್ತ ಸಮಾಜವಾದಿ ಪಕ್ಷದಿಂದ ಸ್ಪರ್ಧಿಸಿ ಮೊದಲ ಬಾರಿಗೆ ವಿಧಾನಸಭೆಗೆ ಆಯ್ಕೆಯಾಗಿದ್ದರು.
* 1972 ರಲ್ಲಿ ಸಂಯುಕ್ತ ಸಮಾಜವಾದಿ ಪಕ್ಷದಿಂದ ವಿಧಾನ ಸಭೆಗೆ ಮರು ಆಯ್ಕೆ.
* ನಂತರ ಸಮಾಜವಾದಿ ಪಕ್ಷ ತೊರೆದು, ಕರ್ನಾಟಕ ಜನತಾ ರಂಗ ಸ್ಥಾಪನೆ.
* 1972 ರಲ್ಲಿ ಕಾಂಗ್ರೆಸ್ಗೆ ಸೇರ್ಪಡೆ. ಗೃಹ, ಲೋಕೋಪಯೋಗಿ ಇಲಾಖೆ ಸಚಿವರಾಗಿ ಕಾರ್ಯನಿರ್ವಹಣೆ. ಗುಂಡೂರಾವ್ ಸಿಎಂ ಆಗಿದ್ದ ಕಾಲವದು.
* 1978ರಲ್ಲಿ ವಿಧಾನ ಸಭೆಗೆ ಸೊರಬದಿಂದ ಮರು ಆಯ್ಕೆ.
* ಆರ್ ಗುಂಡೂರಾವ್ ಜತೆ ಸೇರಿ ಕರ್ನಾಟಕ 'ಕ್ರಾಂತಿರಂಗ'ಮತ್ತೊಮ್ಮೆ ಸ್ಥಾಪನೆ.
* 1983 ರಲ್ಲಿ ಜನತಾ ಕ್ರಾಂತಿರಂಗ ಪಕ್ಷದಿಂದ ವಿಧಾನ ಸಭೆಗೆ ಆಯ್ಕೆ.
* ಮುಖ್ಯಮಂತ್ರಿಯಾಗಿ ರಾಮಕೃಷ್ಣ ಹೆಗಡೆ ಆಯ್ಕೆಯಿಂದ ಅಸಮಾಧಾನ, ಕ್ರಾಂತಿರಂಗ ತೊರೆದು ಮತ್ತೆ ಕಾಂಗ್ರೆಸ್ ಸೇರ್ಪಡೆ.
* 1985 ರಲ್ಲಿ ವಿಧಾನ ಸಭೆಗೆ ಪುನರ್ ಆಯ್ಕೆ.
* ವೀರೇಂದ್ರ ಪಾಟೀಲ್ ಅವರ ಸಂಪುಟದಲ್ಲಿ ಕೃಷಿ, ತೋಟಗಾರಿಕೆ ಸಚಿವರಾಗಿದ್ದರು.
* 1990 ಅಕ್ಟೋಬರ್ 17 ರಂದು ಮುಖ್ಯಮಂತ್ರಿಯಾಗಿ ಬಂಗಾರಪ್ಪ ಅಧಿಕಾರ ಸ್ವೀಕಾರ.
* 1992ರಲ್ಲಿ ಮುಖ್ಯಮಂತ್ರಿ ಸ್ಥಾನದಿಂದ ಪದಚ್ಯುತಿ.
* 1994ರಲ್ಲಿ ಕರ್ನಾಟಕ ಕಾಂಗ್ರೆಸ್ ಪಕ್ಷ ಸ್ಥಾಪನೆ.
* 1994ರ ವಿಧಾನ ಸಭೆ ಚುನಾವಣೆಯಲ್ಲಿ ಸೊರಬ, ಸಾಗರಕ್ಕೆ ಸ್ಪರ್ಧೆ, ಸಾಗರದಲ್ಲಿ ಸೋಲು, ಸೊರಬದಲ್ಲಿ ಗೆಲುವು.
* 1996ರಲ್ಲಿ ಲೋಕಸಭೆಗೆ ಆಯ್ಕೆ.
* 1997ರಲ್ಲಿ ಪುನಃ ಕಾಂಗ್ರೆಸ್ಗೆ ಸೇರ್ಪಡೆ.
* 1998ರಲ್ಲಿ ಮತ್ತೆ ಪಕ್ಷದಲ್ಲಿ ಅಸಮಾಧಾನ 'ಕರ್ನಾಟಕ ವಿಕಾಸ ಪಕ್ಷ' ಸ್ಥಾಪನೆ.
* 1998ರಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಸೋಲು.
* 1999ರಲ್ಲಿ ಕಾಂಗ್ರೆಸ್ ಸೇರಿ ಲೋಕಸಭೆ ಪ್ರವೇಶದ ಜತೆಗೆ ರಾಜ್ಯದಲ್ಲಿ ಕಾಂಗ್ರೆಸ್
ಸರ್ಕಾರ ಸ್ಥಾಪನೆಗೆ ಕಾರಣರಾದರು.
* 2004ರಲ್ಲಿ ಬಿಜೆಪಿ ಸೇರ್ಪಡೆ. ಬಿಜೆಪಿಯಿಂದ ಲೋಕಸಭೆಗೆ ಆಯ್ಕೆ.
* ಲೋಕಸಭೆ ಸದಸ್ಯತ್ವಕ್ಕೆ ರಾಜೀನಾಮೆ, ಸಮಾಜವಾದಿ ಪಕ್ಷ ಸೇರ್ಪಡೆ.
*2005ರ ಜೂನ್ನಲ್ಲಿ ನಡೆದ ಉಪಚುನಾವಣೆಯಲ್ಲಿ ಎಸ್ಪಿಯಿಂದ ಲೋಕಸಭೆಗೆ
ಪುನರಾಯ್ಕೆ.
* 2009ರಲ್ಲಿ ಅವಧಿಗೆ ಮುನ್ನ ಲೋಕಸಭೆ ಸದಸ್ಯತ್ವಕ್ಕೆ ರಾಜೀನಾಮೆ, ಕಾಂಗ್ರೆಸ್
ಸೇರ್ಪಡೆ.
* 15 ಲೋಕಸಭೆ ಚುನಾವಣೆ ಶಿವಮೊಗ್ಗ ಕ್ಷೇತ್ರದಿಂದ ಬಂಗಾರಪ್ಪ ಸ್ಪರ್ಧೆ, ಬಿವೈ ರಾಘವೇಂದ್ರ ವಿರುದ್ಧ ಸೋಲು.
* 2010ರಲ್ಲಿ ಜೆಡಿಎಸ್ ಸೇರ್ಪಡೆ
ಪಕ್ಷದಿಂದ ಪಕ್ಷಕ್ಕೆ ಜಿಗಿದು 'ಪಕ್ಷಾಂತರಿ' ರಾಜಕಾರಣಿಯಾದರೂ, ಹೊಸ ಪ್ರಾದೇಶಿಕ ಪಕ್ಷ ಕಟ್ಟುವ ಸಾಹಸ ಮೆರೆದರು. ಅವರ ಪ್ರಯತ್ನ ಫಲ ಕೊಡದಿದ್ದರೂ, ಸಾಹಸ ಬಹುಮೆಚ್ಚುಗೆ ಪಡೆಯಿತು.
ಸುಮಾರು 31 ವರ್ಷಗಳ ಸುದೀರ್ಘ ರಾಜಕೀಯ ಜೀವನದಲ್ಲಿ ಪ್ರಥಮ ಬಾರಿಗೆ ಯಾವ ಸದನದಲ್ಲೂ ಸದಸ್ಯನಾಗದೆ ಅಧಿಕಾರ ವಂಚಿತರಾದ ಬಂಗಾರಪ್ಪ ಅವರಿಗೆ ರಾಜಕೀಯವಾಗಿ ಪುತ್ರ ವಸಂತ್ ಕುಮಾರ್(ಕುಮಾರ್ ಬಂಗಾರಪ್ಪ) ವೈರಿಯಾಗಿದ್ದು ಸಹಿಸಲು ಆಗದಂಥ ನೋವುಂಟು ಮಾಡಿತ್ತು. ಇನ್ನೊಬ್ಬ ಪುತ್ರ ಮಧುವನ್ನು ರಾಜಕೀಯವಾಗಿ ಮೇಲಕ್ಕೆ ತರಲು ಇನ್ನಿಲ್ಲದ್ದಂತೆ ಯತ್ನಿಸಿ ಸೋಲುಂಡಿದ್ದರು.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications