ಡಿವಿಎಸ್ ರಾಜೀನಾಮೆ, ಕಣಕ್ಕೆ ಯಾರು ಇಳಿತಾರೇ?

ತಾನು ಡಿ.27ರಂದು ವಿಧಾನಪರಿಷತ್ನ ಸದಸ್ಯನಾಗಿ ಪ್ರಮಾಣ ವಚನ ಸ್ವೀಕರಿಸಿ, ಮರುದಿನ ನವದೆಹಲಿಗೆ ತೆರಳಿ ಸಂಸತ್ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ರಾಜ್ಯದ ಮುಖ್ಯಮಂತ್ರಿ ಡಿವಿ ಸದಾನಂದ ಗೌಡ ಹೇಳಿದ್ದಾರೆ.
ದೆಹಲಿ ಭೇಟಿ ಸಂದರ್ಭದಲ್ಲಿ ಈಶ್ವರಪ್ಪ ಹಾಗೂ ಯಡಿಯೂರಪ್ಪ ಅವರ ನಾಯಕತ್ವ ಸಂಬಂಧಿತ ಹೇಳಿಕೆಗಳ ಕುರಿತು ಹೈಕಮಾಂಡ್ ಜೊತೆ ಸದಾನಂದ ಗೌಡರು ಚರ್ಚಿಸುವ ಸಾಧ್ಯತೆಯಿದೆ.
ಯಾವಾಗ ಚುನಾವಣೆ?: ತೆರವು ಮಾಡಿದ ಸಂಸದ ಸ್ಥಾನಕ್ಕೆ ಚುನಾವಣೆ ಯಾವಾಗ ನಡೆಸಬೇಕು ಎಂಬುದನ್ನು ಚುನಾವಣಾ ಆಯೋಗ ನಿರ್ಧರಿಸಲಿದೆ ಎಂದು ಸದಾನಂದ ಗೌಡರು ಹೇಳಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಬೀರೂರು, ಉಡುಪಿ ಜಿಲ್ಲೆಯ ಬೈಂದೂರು ಹೊರತುಪಡಿಸಿ ಉಡುಪಿ ಲೋಕಸಭೆ ಕ್ಷೇತ್ರ ರೂಪುಗೊಂಡಿದೆ. ಎಬಿವಿಪಿ, ದತ್ತಮಾಲೆ ಅಭಿಯಾನ, ಭಜರಂಗದಳ ಸಂಚಾಲಕ, ಬಿಜೆಪಿ ಯುವ ಮೋರ್ಚಾ ರಾಜ್ಯಾಧ್ಯಕ್ಷ. ಪ್ರಗತಿಪರ ಕೃಷಿಕರಾಗಿರುವ ಮಾಜಿ ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಅವರನ್ನು ಕಣಕ್ಕಿಳಿಸುವಂತೆ ಕಾರ್ಯಕರ್ತರು ಒತ್ತಾಯಿಸುತ್ತಿದ್ದಾರೆ.












Click it and Unblock the Notifications