ಚಿಕ್ಕಮಗಳೂರಲ್ಲಿ ಭಗ್ನಪ್ರೇಮಿಯಿಂದ ಪ್ರಿಯತಮೆಯ ಹತ್ಯೆ

ನಗರದ ತಾಲೂಕು ಕಚೇರಿಯ ಅಕ್ಷರ ದಾಸೋಹ ವಿಭಾಗದಲ್ಲಿ ಕಂಪ್ಯೂಟರ್ ಆಪರೇಟರ್ ಆಗಿದ್ದ ನಯನಾ ಎಂಬ 22 ವರ್ಷದ ಯುವತಿಯೇ ಹತ್ಯೆಗೀಡಾದವಳು. ಕತ್ತು ಸೀಳಿದ ಸುಬ್ರಮಣ್ಯ ಪರಾರಿಯಾಗಿದ್ದಾನೆ. ಹೊಸ ವರ್ಷದ ಮುನ್ನಾದಿನ ಚಿಕ್ಕಮಗಳೂರಿನಲ್ಲಿ ಈ ಘಟನೆ ಕಪ್ಪುಛಾಯೆಯನ್ನು ಮೂಡಿಸಿದೆ.
ದಂಟರಮಕ್ಕಿ ನಿವಾಸಿಯಾಗಿರುವ ಸುಬ್ರಮಣ್ಯ ಅನೇಕ ವರ್ಷಗಳಿಂದ ನಯನಾಳನ್ನು ಪ್ರೇಮಿಸುತ್ತಿದ್ದ. ಆದರೆ, ಆಕೆ ಪ್ರೇಮವನ್ನು ನಿರಾಕರಿಸುತ್ತಿದ್ದಲೇ ಬಂದಿದ್ದಳು. ನಯನಾಳ ತಿರಸ್ಕಾರದಿಂದ ರೊಚ್ಚಿಗೆದ್ದ ಸುಬ್ರಮಣ್ಯ ಇಂದು ನಯನಾ ಕೆಲಸ ಮಾಡುತ್ತಿದ್ದ ಕಚೇರಿಗೆ ಬಂದು, ನಯನಾ ಕೆಲಸ ಮುಗಿಸಿ ಹೊರಬರುತ್ತಿದ್ದಂತೆ ಚೂರಿಯಿಂದ ಕತ್ತು ಕತ್ತರಿಸಿಹಾಕಿದ್ದಾನೆ.
ಈ ಘಟನೆ ನಡೆದಾಗ ದಾರಿಹೋಕರು ಆಕೆ ರಕ್ಷಣೆಗೆ ಬರಲಿಲ್ಲ ಮತ್ತು ಸುಬ್ರಮಣ್ಯನನ್ನು ಹಿಡಿಯಲು ಯತ್ನಿಸಲಿಲ್ಲ. ಎಲ್ಲರು ಸ್ತಂಭೀಭೂತರಾದಂತೆ ನಿಂತಿದ್ದರು ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದ್ದಾರೆ. ನಯನಾಳನ್ನು ಕೂಡಲೆ ಸರಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ ದಾರಿಯಲ್ಲಿಯೇ ಆಕೆ ಕೊನೆಯುಸಿರೆಳೆದಿದ್ದಾಳೆ.
More From
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications