ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸರಣಿ ಸ್ಫೋಟ: ಮದನಿಗೆ ಜಾಮೀನು ಇಲ್ಲ: ಸುಪ್ರೀಂ

By Mahesh
|
Google Oneindia Kannada News

Bail Reject to Madani
ಬೆಂಗಳೂರು, ಜ.3: 2008ರ ಜುಲೈ 25ರಂದು ಬೆಂಗಳೂರಿನಲ್ಲಿ ಸಂಭವಿಸಿದ ಸರಣಿ ಸ್ಫೋಟದ ರೂವಾರಿ ಅಬ್ದುಲ್ ನಾಸರ್ ಮದನಿಗೆ ಜಾಮೀನು ನೀಡಲು ಸುಪ್ರೀಂಕೋರ್ಟ್ ನ್ಯಾಯಪೀಠ ನಿರಾಕರಿಸಿದೆ. ಈ ಮುಂಚೆ ಜಾಮೀನು ನೀಡಿಕೆ ಬಗ್ಗೆ ನ್ಯಾಯಪೀಠದ ಇಬ್ಬರು ನ್ಯಾಯಮೂರ್ತಿಗಳ ಮಧ್ಯೆ ಭಿನ್ನಾಭಿಪ್ರಾಯ ತಲೆದೋರಿತ್ತು.

ಆದರೆ, ನ್ಯಾ. ಪಿ ಸದಾಶಿವಂ ಮತ್ತು ಜೆ ಚೆಲಮೆಶ್ವರ್ ಅವರಿದ್ದ ಪೀಠ, ಜಾಮೀನು ನೀಡಲು ನಿರಾಕರಿಸಿದೆ. ಪೀಪಲ್ಸ್ ಡೆಮಾಕ್ರೆಟಿಕ್ ಪಾರ್ಟಿ ಸ್ಥಾಪಕ ಅಬ್ದುಲ್ ಮದನಿ ಅನಾರೋಗ್ಯಕ್ಕೆ ಬೆಂಗಳೂರಿನಲ್ಲಿರುವ ಕೊಟ್ಟಕ್ಕಲ್ ಆರ್ಯ ವೈದ್ಯ ಶಾಲಾ ಆಸ್ಪತ್ರೆಗಳಲ್ಲಿ ಸೂಕ್ತ ಚಿಕಿತ್ಸೆ ಕೊಡಿಸುವಂತೆ ಕರ್ನಾಟಕ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಸೂಚಿಸಿದೆ.

ಈ ಮುಂಚೆ ನ್ಯಾ. ಖಟ್ಜು ಮದನಿಗೆ ಜಾಮೀನು ನೀಡುವುದಕ್ಕೆ ಒಲವು ತೋರಿದ್ದರು, ನ್ಯಾ. ಮಿಶ್ರಾ ಅವರು ಜಾಮೀನು ನೀಡಿಕೆಗೆ ನಿರಾಕರಿಸಿದ್ದರು.

2008ರಲ್ಲಿ ಬೆಂಗಳೂರಿನಲ್ಲಿ ಸುಮಾರು 9 ಕಡೆ ಸಂಭವಿಸಿದ ಸರಣಿ ಸ್ಫೋಟದಲ್ಲಿ 2 ಸಾವನ್ನಪ್ಪಿದ್ದರು. 20ಕ್ಕೂ ಅಧಿಕ ಜನ ಗಾಯಗೊಂಡಿದ್ದರು.

ಕೊಯಮತ್ತೂರಿನ ಸರಣಿ ಸ್ಫೋಟ ರುವಾರಿಯೂ ಆಗಿರುವ ಮದನಿ ಕೊಯಮತ್ತೂರು ಸ್ಫೋಟ ಪ್ರಕರಣದಿಂದ ಖುಲಾಸೆಗೊಂಡಿದ್ದಾನೆ. ಆದರೆ, ಬೆಂಗಳೂರು ಪ್ರಕರಣದ ಪ್ರಮುಖ ಆರೋಪಿಯಾಗಿ
ಮದನಿ ಪ್ರಸ್ತುತ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾನೆ.

English summary
The Supreme Court bench comprising of Justices Chelameshwar and Sadashivam today(Jan.3) rejected the bail petition of PDP chairman Abdul Nasser Maudani who is the accused in the 2008 Bangalore Serial blast case. Chief Justice of India for constituting another bench in view of differences among them.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X