ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾಂಗ್ರೆಸ್ ತೊರೆಯಲು 40 ಶಾಸಕರು ಸಿದ್ಧ

By Mahesh
|
Google Oneindia Kannada News

BC Patil
ಮೈಸೂರು, ಜ.4: ಪ್ರಸ್ತುತ ರಾಜಕೀಯ ಪರಿಸ್ಥಿತಿಯನ್ನು ಗಮನಿಸಿದರೆ ಸಂಕ್ರಾಂತಿ ನಂತರ ಸ್ಫೋಟಕ ಸುದ್ದಿಗಳು ಹೊರಬೀಳುವ ಸಾಧ್ಯತೆಯಿದೆ. ಸುಮಾರು 35 ರಿಂದ 40 ಮಂದಿ ಕಾಂಗ್ರೆಸ್ ಹಾಗೂ ಬಿಜೆಪಿ ಶಾಸಕರು ಪಕ್ಷವನ್ನು ತೊರೆಯಲು ಸಿದ್ಧರಿದ್ದಾರೆ ಎಂದು ಶಾಸಕ ಬಿಸಿ ಪಾಟೀಲ್ ಹೇಳಿದ್ದಾರೆ.

ಸುತ್ತೂರು ಶ್ರೀಗಳು ಹಾಗೂ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಜೊತೆ ದೀರ್ಘ ಸಮಾಲೋಚನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಪಾಟೀಲ್ ಮಾತನಾಡಿದರು.

ಕಾಂಗ್ರೆಸ್ ನಲ್ಲಿ ದೇವರಿಗಿಂತ ಪೂಜಾರಿಗಳ ಮಾತೇ ದೊಡ್ಡದಾಗಿದೆ. ಇಲ್ಲಿನ ಪರಿಸ್ಥಿತಿಯನ್ನು ಸಮಗ್ರವಾಗಿ ಹೈಕಮಾಂಡ್ ಗೆ ತಿಳಿಸುತ್ತೇನೆ. ಹಿರಿಯ ನಾಯಕ ಸಿದ್ದರಾಮಯ್ಯ ಅವರೊಡನೆ ಮುಂದಿನ ನಡೆ ಬಗ್ಗೆ ಚರ್ಚಿಸಿದ್ದೇನೆ ಎಂದರು.

ಸಿದ್ದರಾಮಯ್ಯ ಎನ್ ಸಿಪಿ ಸೇರುತ್ತಾರಾ? ಎಂಬ ಪ್ರಶ್ನೆಗೆ ಉತ್ತರಿಸಿದ ಪಾಟೀಲ್, ಈ ಬಗ್ಗೆ ಈ ಸಂದರ್ಭದಲ್ಲಿ ಏನು ಹೇಳಲಾಗದು. ಸಂಕ್ರಾಂತಿ ನಂತರ ಉತ್ತರ ದೊರೆಯಲಿದೆ. ಸಿದ್ದರಾಮಯ್ಯ ಅವರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ಹೇಳಿದರು.

English summary
Around 35-40 congress MLAs are ready to quit Karnataka congress and join National congress Party said MLA BC Patil in Mysore today(Jan.4). Patil had meeting with Suttur seer and congress leader Siddaramaiah.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X