ಮೆಟ್ರೋ ರೈಲು 2ನೇ ಹಂತಕ್ಕೆ 27 ಸಾವಿರ ಕೋ ಬಿಡುಗಡೆ

ಜಪಾನ್ ಸರ್ಕಾರದ 'ಜೈಕಾ' ಸಂಸ್ಥೆಯಿಂದ ಆರ್ಥಿಕ ನೆರವು ಪಡೆದು ಯೋಜನೆಯನ್ನು ಅನುಷ್ಠಾನಗೊಳಿಸಲಾಗುವುದು ಯೋಜನೆಯ ಕಾಮಗಾರಿ ನಿರ್ವಹಣೆಯನ್ನು ಬೆಂಗಳೂರು ಮೆಟ್ರೊ ರೈಲು ನಿಗಮ (ಬಿಎಂಆರ್ಸಿಎಲ್) ನೋಡಿಕೊಳ್ಳಲಿದೆ.
2013ಕ್ಕೆ ಮೊದಲ ಹಂತದ ಎಲ್ಲಾ ಮೆಟ್ರೋ ರೈಲು ನಿಲ್ದಾಣಗಳು ಪೂರ್ಣಗೊಳ್ಳಲಿದೆ. ಮೆಜೆಸ್ಟಿಕ್ ಮೆಟ್ರೊ ರೈಲು ನಿಲ್ದಾಣ ನಿರ್ಮಾಣ ಆರೇಳು ತಿಂಗಳು ತಡವಾಗಲಿದೆ ಎಂದು ಸಚಿವ ಬೊಮ್ಮಾಯಿ ಹೇಳಿದರು.
ಮಾರ್ಗಗಳು: ಜಯನಗರದಿಂದ ಎಲೆಕ್ಟ್ರಾನಿಕ್ ಸಿಟಿವರೆಗಿನ ಹೊಸ ಮಾರ್ಗ ಜಯದೇವ ಆಸ್ಪತ್ರೆ, ಬಿಟಿಎಂ ಬಡಾವಣೆ ಮತ್ತು ರೇಷ್ಮೆ ಮಂಡಳಿ ವೃತ್ತದ ಮೂಲಕ ಹಾದುಹೋಗಲಿದೆ.
ನಾಗವಾರದಿಂದ ಗೊಟ್ಟಿಗೆರೆ ನಡುವಣ ಹೊಸ ಮಾರ್ಗ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್-ಬೆಂಗಳೂರು ಮೂಲಕ ಹಾದುಹೋಗಲಿದೆ.
ಪೂರ್ವ-ಪಶ್ಚಿಮ ಕಾರಿಡಾರ್ನಲ್ಲಿ ಮೊದಲನೇ ಹಂತದ ಕಾಮಗಾರಿ ಕೊನೆಗೊಂಡ ಬೈಯಪ್ಪನಹಳ್ಳಿಯಿಂದ ವೈಟ್ಫೀಲ್ಡ್ವರೆಗೆ (15.5 ಕಿ.ಮೀ), ಮೈಸೂರು ರಸ್ತೆಯ ನಾಯಂಡಹಳ್ಳಿಯಿಂದ ಕೆಂಗೇರಿವರೆಗೆ (6.5) ಮಾರ್ಗಗಳು ವಿಸ್ತರಣೆಯಾಗಲಿವೆ.
ಉತ್ತರ-ದಕ್ಷಿಣ ಕಾರಿಡಾರ್ನಲ್ಲಿ ಹೆಸರಘಟ್ಟ ಅಡ್ಡರಸ್ತೆಯಿಂದ ಬೆಂಗಳೂರು ಅಂತರರಾಷ್ಟ್ರೀಯ ಪ್ರದರ್ಶನ ಕೇಂದ್ರದವರೆಗೆ (3.8 ಕಿ.ಮೀ) ಮತ್ತು ಪುಟ್ಟೇನಹಳ್ಳಿ ಅಡ್ಡರಸ್ತೆಯಿಂದ ಅಂಜನಾಪುರ ಉಪನಗರದವರೆಗೆ ಮೆಟ್ರೊ ರೈಲು ಮಾರ್ಗ ವಿಸ್ತರಣೆಗೊಳ್ಳಲಿದೆ.
ನಾಗವಾರ-ಗೊಟ್ಟಿಗೆರೆ ನಡುವಣ ಹೊಸ ಮಾರ್ಗ 21.1 ಕಿ.ಮೀ. ಉದ್ದವಿದ್ದು, 20 ನಿಲ್ದಾಣಗಳು ಬರಲಿವೆ. 18.8 ಕಿ.ಮೀ. ಉದ್ದದ ಆರ್.ವಿ.ರಸ್ತೆ-ಬೊಮ್ಮಸಂದ್ರ ನಡುವಣ ಮಾರ್ಗದಲ್ಲಿ 15 ನಿಲ್ದಾಣಗಳು ಬರುತ್ತವೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications