ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಎಚ್ಡಿಕೆ, ಚೆನ್ನಿಗಪ್ಪ ವಿರುದ್ಧ ಲೋಕಾಯುಕ್ತ ಪೊಲೀಸ್ ಎಫ್ಐಆರ್
ಚಾಮರಾಜನಗರದ ಮಹದೇವಸ್ವಾಮಿ ಎಂಬುವವರು ಜ.2ರಂದು ದಾಖಲಿಸಿದ್ದ ಖಾಸಗಿ ದೂರಿನ ಅನ್ವಯ ತನಿಖೆ ನಡೆಸಿ ಜ.6ರೊಳಗೆ ವರದಿ ನೀಡುವಂತೆ ಲೋಕಾಯುಕ್ತ ನ್ಯಾಯಮೂರ್ತಿ ಸುಧೀಂದ್ರರಾವ್ ಅವರು ಆದೇಶಿಸಿದ್ದರು. ಸಿಆರ್ಪಿಸಿಯ ಸೆಕ್ಷನ್ 156(3) ಅಡಿಯಲ್ಲಿ ತನಿಖೆಗೆ ಆದೇಶ ನೀಡಲಾಗಿತ್ತು.
2007ರ ಅಕ್ಟೋಬರ್ನಲ್ಲಿ ತಣಿಸಂದ್ರ ಗ್ರಾಮದಲ್ಲಿ 3.8 ಎಕರೆ ಜಮೀನನ್ನು ಅಕ್ರಮವಾಗಿ ಡಿನೋಟಿಫೈ ಮಾಡಲು ಕುಮಾರಸ್ವಾಮಿ ಆದೇಶಿಸಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ. ಅಂದಿನ ಅರಣ್ಯ ಸಚಿವರಾಗಿದ್ದ ಚೆನ್ನಿಗಪ್ಪ ಕೂಡ ಕುಮಾರಸ್ವಾಮಿ ಜೊತೆ ಈ ಅಕ್ರಮದಲ್ಲಿ ಶಾಮೀಲಾಗಿದ್ದಾರೆ ಎಂದು ದೂರಲಾಗಿದೆ.
Comments
ಡಿನೋಟಿಫಿಕೇಷನ್ ಬೆಂಗಳೂರು ಅರ್ಕಾವತಿ ಜಿಲ್ಲಾಸುದ್ದಿ hd kumaraswamy denotification bangalore arkavathy layout
English summary
Lokayukta police have filed first information report (FIR) against HD Kumaraswamy and then forest minister Chennigappa in an illegal denotification case filed by Mahadevaswamy of Chamarajnagar.
Story first published: Friday, January 6, 2012, 17:23 [IST]