ಬೆಂಗಳೂರಿನಲ್ಲಿ ಲಸಿಕೆಯಿಲ್ಲದ ಮಾರಣಾಂತಿಕ ಕ್ಷಯ?

ಬೆಂಗಳೂರಿನಲ್ಲಿ ಇದುವರೆಗೆ ಇಬ್ಬರು ಈ ಮಾರಕ ರೋಗದ ಸೋಂಕಿಗೆ ಒಳಗಾಗಿದ್ದಾರೆ ಎಂದು ಪ್ರಾಥಮಿಕ ವರದಿಯಿಂದಷ್ಟೇ ತಿಳಿದು ಬಂದಿದೆ. ಇದು ಕ್ಷಯರೋಗದ ಒಂದು ಹಂತ. ಇದು ಅಂದಾಜು ಒಂದು ಲಕ್ಷ ಕ್ಷಯ ರೋಗಿಯಲ್ಲಿ ಒಬ್ಬರಿಗೆ ಬರುವ ಸಾಧ್ಯತೆ ಇರುತ್ತದೆ. ಇದರ ಪತ್ತೆಗೆ ಸುಸಜ್ಜಿತ ಪ್ರಯೋಗಾಲಯ ಬೇಕಾಗಿದ್ದು, ಸದ್ಯ ಇದರ ಪರಿಶೀಲನೆ ಚೆನ್ನೈ ಟಿಬಿ ಸಂಶೋಧನಾ ಕೇಂದ್ರದಲ್ಲಿ ಮಾತ್ರ ಸಾಧ್ಯ ಎಂದು ರಾಜೀವ್ ಗಾಂಧೀ ಎದೆರೋಗಗಳ ಆಸ್ಪತ್ರೆಯ ನಿರ್ದೇಶಕ ಡಾ. ಶಶಿಧರ್ ಬುಗ್ಗಿ ಹೇಳಿದ್ದಾರೆ.
ಯಾವುದೇ ಲಸಿಕೆಗೆ ಬಗ್ಗದ ಈ ಸೋಂಕಿನ ರೋಗ ಬಂದರೆ ಸಾವೇ ಗತಿ ಎನ್ನಲಾಗುತ್ತದೆ. ಲಸಿಕೆ ಇದ್ದರೂ ಭಾರತದಲ್ಲಿ ಸಾವಿರಾರು ಮಂದಿ ಕ್ಷಯರೋಗಕ್ಕೆ ಬಲಿಯಾಗುತ್ತಿದ್ದಾರೆ. ಈಗ ಲಸಿಕೆಯಿಲ್ಲದ ವಾಸಿ ಮಾಡಲಾಗದ ಈ ಕಾಯಿಲೆಯಿಂದ ಜನರು ಆತಂಕ ಪಡುವಂತಾಗಿದೆ ಎಂದು ಹಿಂದೂಜಾ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಮುಂಬೈ ನಗರದಲ್ಲೂ ಈ ಸೋಂಕು ಇದೆಯೆಂದು ಹೇಳಲಾಗಿದೆ.
ಸಾಧಾರಣ ಕ್ಷಯರೋಗ ಇರುವ ವ್ಯಕ್ತಿ ಆರರಿಂದ ಒಂಬತ್ತು ತಿಂಗಳ ಅವಧಿಯಲ್ಲಿ ಮೊದಲ ಹಂತದ ಚಿಕಿತ್ಸೆ ಪೂರ್ಣಗೊಳಿಸಲು ವಿಫಲನಾದರೆ ಯಾವ ಲಸಿಕೆಗೂ ಬಗ್ಗದ ಟಿಡಿಆರ್ ಟಿಬಿ ( Totally Drug Resistant - Tuberculosis) ಕಾಣಿಸಿಕೊಳ್ಳುತ್ತದೆ. ಇದಕ್ಕೆ ಸಂಬಂಧಪಟ್ಟ ಲಸಿಕೆ ತೆಗೆದುಕೊಂಡ ನಂತರ ರೋಗಿಗೆ ತಾನು ಹುಷಾರಾದ ಅನುಭವವಾದರೆ ಲಸಿಕೆ ತೆಗೆದು ಕೊಳ್ಳುವುದನ್ನು ನಿಲ್ಲಿಸುತ್ತಾನೆ. ಆದರೆ ಆಗ ಆತನ ದೇಹದಲ್ಲಿರುವ ಟಿಬಿ ಕಾರಕ ಕ್ರಿಮಿಗಳು ನಾಶವಾಗಿರುವುದಿಲ್ಲ, ಆಗ ಇಂಥಹ ಮಾರಣಾಂತಿಕ ಕಾಯಿಲೆ ಹರಡುತ್ತದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications