ರೆಡ್ಡಿ ವಿರೋಧಿ ಟಪಾಲ್ ಗಣೇಶ್ ಬಿಜೆಪಿಗೆ ಟಾಟಾ

ಜನವರಿ 16ರಂದು ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದಾಗಿ ತಿಳಿಸಿರುವ ಗಣೇಶ್, ಮುಂದೆ ಯಾವ ಪಕ್ಷ ಸೇರಬೇಕು ಎಂಬುದನ್ನು ಇನ್ನೂ ನಿರ್ಧರಿಸಿಲ್ಲ ಎಂದು ಹೇಳಿದ್ದಾರೆ.
'ಬಿಜೆಪಿಯಲ್ಲಿ ಜಾತಿ ರಾಜಕಾರಣ ಮಿತಿಮೀರಿದೆ. ನಿಷ್ಠಾವಂತರಿಗೆ ಇಲ್ಲಿ ಸ್ಥಾನವಿಲ್ಲ. ಭ್ರಷ್ಟರಿಗೆ ಮಣೆ ಹಾಕಲಾಗುತ್ತದೆ ಎಂದು ದೂರಿರುವ ಟಪಾಲ್, ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿದ್ದ ರೆಡ್ಡಿ ಸೋದರರ ವಿರುದ್ಧ ಕ್ರಮ ಕೈಗೊಳ್ಳಲು ಬಿಜೆಪಿ ಹಿಂಜರಿಯುತ್ತಿದೆ. ಅಕ್ರಮ ಗಣಿಗಾರಿಕೆಯನ್ನು ಖಂಡಿಸಲೂ ಪಕ್ಷ ಮುಂದಾಗಿಲ್ಲ. ಇದು ನನಗೆ ವಿಪರೀತ ಮುಜುಗರ ತಂದಿದೆ' ಎಂದು ಕಾರಣ ಹೇಳಿ ಬಿಜೆಪಿ ಮನೆಯಿಂದ ಅವರು ಕಾಲು ಹೊರಗಿಟ್ಟಿದ್ದಾರೆ.
ಪ್ರಮುಖ ಗಣಿ ಉದ್ಯಮಿ, ರೆಡ್ಡಿಗಳ ಕಡು ವಿರೋಧಿ ಟಪಾಲ್ ಗಣೇಶ್ ಅವರು ಬಳ್ಳಾರಿ ಗ್ರಾಮಾಂತರ ವಿಧಾನಸಭಾ ಉಪ ಚುನಾವಣೆ ಕಾಂಗ್ರೆಸ್ಗೆ ಗುಡ್ ಬೈ ಹೇಳಿ ಮಾಗಿಯ ಚಳಿಯಲ್ಲಿ ಕಮಲ ಪಕ್ಷವನ್ನು ಅಪ್ಪಿಕೊಂಡಿದ್ದರು.












Click it and Unblock the Notifications