ಸಿಬಿಐ ಕೋರ್ಟಿನಲ್ಲಿ ಗೋಳಾಡಿದ ಜನಾರ್ದನ ರೆಡ್ಡಿ

ಪ್ರಕರಣದ ಸಂಬಂಧ ವಿಚಾರಣಾಧೀನ ಕೈದಿಯಾಗಿ ಸೆ.5ರಂದು ಹೈದರಾಬಾದಿನ ಚಂಚಲಗೂಡ ಜೈಲು ಸೇರಿಕೊಂಡ ಜನಾರ್ದನ ರೆಡ್ಡಿ ಅಂದಿನಿಂದಲೂ ವಿಡಿಯೋ ಕಾನ್ಫರೆನ್ಸ್ ಮೂಲಕ ಜೈಲಿನಿಂದಲೇ ವಿಚಾರಣೆಗೆ ಒಳಗಾಗುತ್ತಿದ್ದರು. ಆದರೆ ನಿನ್ನೆ, ವಿಶೇಷ ಬಂದೋಬಸ್ತಿನಲ್ಲಿ ಬೆಳಗ್ಗೆ 11 ಗಂಟೆಗೆ ಕೋರ್ಟ್ ಕಟೆಕಟೆಗೆ ಬಂದಿದ್ದರು.
ಕೋರ್ಟಿನೊಳಕ್ಕೆ ಬರುವವರೆಗೂ ಸಾವಧಾನವಾಗಿಯೇ ಇದ್ದ ರೆಡ್ಡಿ, ವಿಚಾರಣೆ ತೀವ್ರವಾಗುತ್ತಿದ್ದಂತೆ ಭಾವಾವೇಶಕ್ಕೊಳಗಾದರು. ಹಿಂದಿನ ದಿನವಷ್ಟೇ ಜಾಮೀನು ಲಭಿಸದೆ ಜೈಲಿನಲ್ಲೇ ತಮ್ಮ ಹುಟ್ಟುಹಬ್ಬ ಆಚರಿಸಿಕೊಳ್ಳುವಂತಾಗಿದ್ದು ರೆಡ್ಡಿ ಅವರನ್ನು ತೀವ್ರವಾಗಿ ಭಾದಿಸಿದಂತಿತ್ತು. ರೆಡ್ಡಿಗೆ 'ಹೇಗಾದರೂ ಮಾಡಿ ಜೈಲಿನಿಂದ ಪಾರಾದರೆ ಸಾಕಪ್ಪಾ' ಎನಿಸಿದ್ದು ವಿಚಾರಣೆ ನಡೆಯುತ್ತಿದ್ದಾಗಲೇ 'ನನಗೆ ಜಾಮೀನು ನೀಡಿ' ಎಂದೂ ನ್ಯಾಯಾಧೀಶರನ್ನು ಪರಿಪರಿಯಾಗಿ ಬೇಡಿಕೊಂಡರು.
ಹಾಗಂತ ಅವರೇನೂ ಜಾಮೀನು ಅರ್ಜಿ ಸಲ್ಲಿಸಿರಲಲ್ಲ. ಆದರೂ 'ಜಾಮೀನು ನೀಡಿ' ಎಂದು ಬಾಯಿ ಮಾತಿನಲ್ಲೇ ಜಡ್ಜ್ ಗೆ ಮೊರೆಯಿಟ್ಟರು. 'ನಾನು ಕೆಟ್ಟ ಚಾರಿತ್ರ್ಯದ ವ್ಯಕ್ತಿಯಲ್ಲ. ಸಭ್ಯನೇ. ದೇಶ ಬಿಟ್ಟು ಓಡಿಹೋಗಲ್ಲ. ಕೋರ್ಟ್ ಕಾನೂನು ಪ್ರಕಾರವೇ ನಡೆದುಕೊಳ್ಳುತ್ತೇನೆ. ಆದ್ದರಿಂದ ದಯವಿಟ್ಟು ನನ್ನನ್ನು ಬಿಟ್ಟುಬಿಡಿ' ಎಂದು ಒಂದೇ ಸಮನೆ ನ್ಯಾಯಾಧೀಶರತ್ತ ನೋಡುತ್ತಾ ಅಲವತ್ತುಕೊಂಡರು.
ಮುಂದ...!? ಸರಿ ಮಂದೇನಾಯಿತು? ಜಡ್ಜ್ ಏನಾದರೂ ಕರಗಿ ನೀರಾದರಾ? ರೆಡ್ಡಿಗೆ ಜಾಮೀನು ನೀಡಿಯೇ ಬಿಟ್ಟರಾ? ಎಂಬ ಪ್ರಶ್ನೆಗಳಿಗೆಲ್ಲ ಉತ್ತರವಾಗಿ ನ್ಯಾಯಾಧೀಶರು 'ಹಂಗೆಲ್ಲ ಬೇಲ್ ಕೊಡೋಕೆ ಬರೊಲ್ಲ. ಹೈಕೋರ್ಟಿನಲ್ಲಿ ನಿಮ್ಮ ಜಾಮೀನು ಅರ್ಜಿ ವಿಚಾರಣೆ ನಡೆದಿದೆ' ಎಂದು ಸಾರುತ್ತಾ ಜ. 25 ರವರೆಗೆ ರೆಡ್ಡಿ ನ್ಯಾಯಾಂಗ ಬಂಧನದ ಅವಧಿಯನ್ನು ಮುಂದೂಡಿದರು.
ಇದೇ ವೇಳೆ ಪ್ರಕರಣದ ಸಂಬಂಧ ಸಿಬಿಐ ಸಲ್ಲಿಸಿರುವ ಆರೋಪಪಟ್ಟಿಯನ್ನು ಮೂವರು ಆರೋಪಿಗಳಿಗೆ (ಗಾಲಿ ಜನಾರ್ದನ ರೆಡ್ಡಿ, ಬಿವಿ ಶ್ರೀನಿವಾಸ ರೆಡ್ಡಿ ಮತ್ತು ವಿಡಿ ರಾಜಗೋಪಾಲ್. ಮತ್ತೊಬ್ಬ ವಿಚಾರಾಧೀನ ಕೈದಿ ಶ್ರೀಲಕ್ಷ್ಮಿ ಜೈಲಿನಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೊಳಗಾದರು) ಕೋರ್ಟ್ ವಿತರಿಸಿತು.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications