ಷೇರುಪೇಟೆಯಲ್ಲಿ ಸರ್ಕಾರಕ್ಕೆ 5 ಲಕ್ಷ ಕೋಟಿ ರೂ ನಷ್ಟ

ಕಳೆದ ವರ್ಷ ಮುಂಬೈ ಷೇರು ಪೇಟೆ ಸುಮಾರು ಶೇ.25 ರಷ್ಟು ಕುಸಿತ ದಾಖಲಿಸಿತು. ದೇಶದ ಷೇರು ಮಾರುಕಟ್ಟೆಯಲ್ಲಿ ಕೇಂದ್ರ ಸರ್ಕಾರ ಅತೀ ದೊಡ್ಡ ಹೂಡಿಕೆದಾರನಾಗಿದ್ದು 2011 ರಲ್ಲಿ ಸುಮಾರು 5.17 ಲಕ್ಷ ಕೋಟಿ ರೂಪಾಯಿಗಳಷ್ಟು ಹಣವನ್ನು ಕಳೆದುಕೊಂಡಿದೆ ಎಂದು ಅಂದಾಜಿಸಲಾಗಿದೆ.
ಸಾರ್ವಜನಿಕ ರಂಗದ 71 ನೋಂದಾಯಿತ ಕಂಪೆನಿಗಳಲ್ಲಿ ಸರ್ಕಾರ ಹೂಡಿಕೆ ಮಾಡಿದ್ದು ಹೂಡಿಕೆಯ ಒಟ್ಟು ಮೌಲ್ಯ 19.5 ಲಕ್ಷ ಕೋಟಿ ರೂಪಾಯಿಗಳಾಗಿವೆ. ಇದರಲ್ಲಿ ಸುಮಾರು ಶೇ 26.5 ರಷ್ಟು ಅಂದರೆ 5.17 ಲಕ್ಷ ಕೋಟಿ ರೂಪಾಯಿಗಳಷ್ಟು ಮೌಲ್ಯ ಕುಸಿತವಾಗಿದೆ.
ಖಾಸಗಿ ಸಂಸ್ಥೆಗಿಂತ ಸರ್ಕಾರಕ್ಕೆ ನಷ್ಟ ಅಧಿಕ: ಖಾಸಗಿ ಸಂಸ್ಥೆಗಳಿಗೆ ಹೋಲಿಸಿದರೆ ಸರ್ಕಾರದ ನಷ್ಟ ಹೆಚ್ಚಾಗಿದ್ದು ಖಾಸಗಿ ಸಮೂಹಗಳು ಅಲ್ಪ ವನ್ನು ಕಳೆದುಕೊಂಡಿವೆ ಮುಖೇಶ್ ಅಂಬಾನಿ ಮಾಲೀಕತ್ವದ ರಿಲಯನ್ಸ್ ಇಂಡಸ್ಟ್ರಿ ಸಮೂಹದ ಮಾರುಕಟ್ಟೆ ಮೌಲ್ಯ ಕಳೆದ ವರ್ಷ 1.1 ಲಕ್ಷ ಕುಸಿದಿದೆ.
ಟಾಟಾ ಸಮೂಹದ ಮಾರುಕಟ್ಟೆ ಮೌಲ್ಯ 87,000 ಕೋಟಿ ರೂಪಾಯಿಗಳಷ್ಟು ಹಾಗೂ ಅನಿಲ್ ಅಂಬಾನಿ ಸಮೂಹದ ರಿಲಯನ್ಸ್ ಧೀರೂ ಬಾಯಿ ಅಂಬಾನಿ ಸಮೂಹ 61,000 ಕೋಟಿ ರೂಪಾಯಿಗಳಷ್ಟು, ಗೌತಮ್ ಅದಾನಿ ಮಾಲೀಕತ್ವದ ಅದಾನಿ ಸಮೂಹ ಸುಮಾರು 58,000 ಕೋಟಿ ರೂಪಾಯಿಗಳಷ್ಟು ಮೌಲ್ಯವನ್ನು ಕಳೆದುಕೊಂಡಿದೆ.
ಸಾರ್ವಜನಿಕ ರಂಗದ ಕಂಪೆನಿಗಳಲ್ಲಿನ ಸರ್ಕಾರ ಬಂಡವಾಳ ಹಿಂತೆಗೆತ, ಅಸ್ಥಿರತೆ ಕುರಿತು ಗೊಂದಲ ನಿವಾರಣೆಯಾಗಬೇಕಿದೆ. ಕಂಪೆನಿಗಳ ಷೇರು ಮೌಲ್ಯ ಕುಸಿದಿದ್ದರೂ ಕಂಪೆನಿಗಳ ಪಿಹೆಚ್ ಮೌಲ್ಯ ಉತ್ತಮ ಲಾಭಾಂಶ ವಿತರಣೆ, ಬುಫ್ ಮೌಲ್ಯ, ಹಣಕಾಸು ಸ್ಥಿತಿ ಉತ್ತಮವಾಗೇ ಇದ್ದು ಈ ವರ್ಷ ಏರಿಕೆ ದಾಖಲಿಸಲಿದೆ ಎಂದು ಹೂಡಿಕೆ ತಜ್ಞರು ಹೇಳುತ್ತಾರೆ.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications