Get Updates
Get notified of breaking news, exclusive insights, and must-see stories!

ಉಡುಪಿ ಪರ್ಯಾಯ: ಮುಸ್ಲಿಂ, ಕ್ರೈಸ್ತರಿಂದ ಹೊರೆಕಾಣಿಕೆ

Udupi Paryaya
ಉಡುಪಿ, ಜ 14: ಶ್ರೀ ಸೋದೆ ವಾದಿರಾಜ ಮಠದ ಪರ್ಯಾಯ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಭಕ್ತ ಸಮುದಾಯದಿಂದ ಹೊರೆಕಾಣಿಕೆಯ ಮಹಾಪೂರವೇ ಹರಿದು ಬರುತ್ತಿದೆ. ರಾಜ್ಯ ಅಂತರರಾಷ್ಟ್ರೀಯ ಕ್ರೈಸ್ತ ಒಕ್ಕೂಟದಿಂದ ಹೊರೆಕಾಣಿಕೆಯನ್ನು ಸಮರ್ಪಿಸಲಾಗಿದೆ. ಅಲ್ಲದೇ ಇದೇ ಮೊದಲ ಬಾರಿಗೆ ಜಿಲ್ಲೆಯ ಇನ್ನಂಜೆ ಶಾಲೆಯ ಮುಸಲ್ಮಾನ ವಿದ್ಯಾರ್ಥಿಗಳು ಹೊರೆಕಾಣಿಕೆ ಸಲ್ಲಿಸಿದ್ದು ವಿಶೇಷ.

ರಾಜ್ಯ ಕ್ರೈಸ್ತ ಒಕ್ಕೂಟದ ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷರ ನೇತ್ರತ್ವದಲ್ಲಿ ಮೆರವಣಿಗೆಯಲ್ಲಿ ತೆರಳಿದ ಕ್ರೈಸ್ತ ಬಾಂಧವರು ಸೋದೆ ಮಠಕ್ಕೆ ಹೊರೆಕಾಣಿಕೆ ಸಮರ್ಪಿಸಿದ್ದಾರೆ. ಎರಡು ವರ್ಷಕ್ಕೊಮ್ಮೆ ನಡೆಯುವ ಪರ್ಯಾಯ ಮಹೋತ್ಸವಕ್ಕೆ ಉಡುಪಿ ಮತ್ತು ದಕ್ಷಿಣಕನ್ನಡ ಜಿಲ್ಲೆಯ ವಿವಿಧ ಭಾಗಗಳಿಂದ ಹೊರೆಕಾಣಿಕೆ ಸಮರ್ಪಣೆಯಾಗುವುದು ವಾಡಿಕೆ.

ಪರ್ಯಾಯ ಸರ್ವಜ್ಞ ಪೀಠವನ್ನೇರಲಿರುವ ಶ್ರೀ.ವಿಶ್ವವಲ್ಲಭತೀರ್ಥ ಶ್ರೀಪಾದರು ವಿವಿಧ ದೇವಾಲಯಗಳಿಗೆ ಭೇಟಿ ನೀಡಿ ಭಕ್ತವೃಂದದಿಂದ ಗೌರವಾರ್ಪಣೆ ಪಡೆಯುತ್ತಿದ್ದಾರೆ. ಶ್ರೀಗಳು ಎಲ್ಲೂರು, ಪಾದಬೆಟ್ಟು, ಕುಂಜೂರು, ಉಚ್ಚಿಲ, ಮುಂಡ್ಕೂರು ಮುಂತಾದ ದೇವಾಲಯಗಳಿಗೆ ಭೇಟಿ ನೀಡಿದ್ದಾರೆ.

ಉಡುಪಿಯಲ್ಲಿಂದು ಮೂರುತೇರು: ವಿದ್ಯುತ್ ದೀಪಾಲಂಕಾರಗಳಿಂದ ಕಂಗೊಳಿಸುತ್ತಿರುವ ರಥಬೀದಿ ಆವರಣದಲ್ಲಿ ಇಂದು ರಾತ್ರಿ ಮೂರು ರಥವನ್ನು ಎಳೆಯಲಾಗುತ್ತದೆ. ಭಾನುವಾರ (ಜ15) ಬೆಳಗ್ಗೆ ಚೂರ್ಣೋತ್ಸವದ ಅಂಗವಾಗಿ ಬ್ರಹ್ಮ ರಥೋತ್ಸವ ನಡೆಯಲಿದ್ದು ಆನಂತರ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+