ಜ.30: ಯಡ್ಡಿ ಭಾರತಿ ಶೆಟ್ಟಿಗೆ ಕೊಟ್ಟ ಸೈಟು ಪ್ರಕರಣ ತೀರ್ಪು

ಪ್ರಕರಣ ಕುರಿತ ವಾದ-ಪ್ರತಿವಾದ ಆಲಿಸಿದ ನ್ಯಾ.ಎನ್.ಕೆ.ಸುಧೀಂದ್ರ ರಾವ್, ಆದೇಶವನ್ನು ಜ.30ರಂದು ಪ್ರಕಟಿಸುವುದಾಗಿ ತಿಳಿಸಿ, ವಿಚಾರಣೆ ಮುಂದೂಡಿದ್ದಾರೆ.
ಸಿರಾಜಿನ್ ಬಾಷಾ ಪರ ವಾದ ಮಾಡಿದ ವಕೀಲ ನಿತಿನ್, ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ ವೇಳೆ ತಮ್ಮ ಪುತ್ರರ ಒಡೆತನದ ಧವಳಗಿರಿ ಪ್ರಾಪರ್ಟೀಸ್ಗೆ ಹಣ ನೀಡಿದ ಪ್ರಕಾಶ್ ಶೆಟ್ಟಿಗೆ ನಗರದ ವಿವಿಧೆಡೆ 3 ಎಕರೆ 35 ಗುಂಟೆ ಜಾಗವನ್ನು ಕಾನೂನು ಬಾಹಿರವಾಗಿ ಡಿನೋಟಿಫಿಕೇಷನ್ ಮಾಡಿದ್ದಾರೆ.
ನಗರದ ಶ್ರೀರಾಂಪುರದಲ್ಲಿ ಬಿ.ಆರ್.ಶೆಟ್ಟಿಗೆ 11 ಎಕರೆ ಡಿನೋಟಿಫೈ ಮಾಡಲಾಗಿದ್ದು, ಆ ಭೂಮಿ ಪೈಕಿ 2 ಎಕರೆಯನ್ನು ಬಿಎಸ್ವೈ ಮಕ್ಕಳ ಕಂಪೆನಿಯ ನಿಕಟವರ್ತಿಯಾದ ಬೆಸ್ಟೋ ಕಂಪೆನಿಗೆ ವರ್ಗಾವಣೆ ಮಾಡಲಾಗಿದೆ.
ಅಲ್ಲದೆ ಶಾಸಕಿ ಭಾರತಿ ಶೆಟ್ಟಿ ಮತ್ತು ಸಂಸದ ಬಿ.ವೈ.ರಾಘವೇಂದ್ರಗೆ ನಗರದ ಆರ್ಎಂವಿ ಲೇಔಟ್ನಲ್ಲಿ ನಿವೇಶನ ಹಂಚಿದ್ದಾರೆ ಎಂದು ಆರೋಪಿಸಿದರು.
ಪ್ರಮುಖ ಸಂಗತಿಯೆಂದರೆ, ಭೂಮಿಯನ್ನು ಒಬ್ಬರ ಹೆಸರಿಗೆ ಮಂಜೂರು ಮಾಡಿ, ಬಳಿಕ ಬೇರೊಬ್ಬರಿಗೆ ವರ್ಗಾವಣೆ ಮಾಡಲಾಗಿದೆ. ಡಿನೋಟಿಫಿಕೇಷನ್ ಮಾಡುವಂತೆ ಶಾಸಕ ಕೃಷ್ಣಯ್ಯ ಶೆಟ್ಟಿ ಪ್ರಸ್ತಾಪ ಸಲ್ಲಿಸಿದ ಕೂಡಲೆ ಬಿಎಸ್ವೈ ಡಿನೋಟಿಫಿಕೇಷನ್ ಮಾಡಿದ್ದಾರೆ. ಇದರಿಂದಾಗಿ ಪ್ರಕರಣದಲ್ಲಿ ಅಧಿಕಾರ
ದುರುಪಯೋಗವಾಗಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ. ಆರೊಪಿಗಳಿಗೆ ಸಮನ್ಸ್ ಜಾರಿ ಮಾಡಲು ಇದು ಸೂಕ್ತ ಪ್ರಕರಣವಾಗಿದ್ದು, ಎಲ್ಲ ಆರೋಪಿಗಳಿಗೆ ಸಮನ್ಸ್ ನೀಡುವಂತೆ ವಕೀಲ ನಿತಿನ್ ಕೋರ್ಟ್ನ್ನು ಕೋರಿದರು.
ಸಿರಾಜಿನ್ ಬಾಷಾ ದಾಖಲಿಸಿದ್ದ ಮೊದಲನೆ ದೂರಿನ ಸಂಬಂಧ ಯಡಿಯೂರಪ್ಪ ಸೇರಿದಂತೆ
ಉಳಿದ ಆರೋಪಿಗಳಿಗೆ ಸಮನ್ಸ್ ಜಾರಿ ಮಾಡುವ ಕುರಿತ ವಿಚಾರಣೆಯನ್ನು ನ್ಯಾಯಾಧೀಶರು
ಸೋಮವಾರಕ್ಕೆ ಮುಂದೂಡಿದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications