ಉಡುಪಿ ಪರ್ಯಾಯ ವಿವಾದ: ಪೇಜಾವರ ಶ್ರೀಗಳೇ ಎಲ್ಲಿದ್ದೀರಿ?

ಪರ್ಯಾಯ ಮಹೋತ್ಸವಕ್ಕೆ ಆಮಂತ್ರಣ ನೀಡಲು ಭಾನುವಾರ (ಜ 15) ಸಂಜೆ ಐದು ಗಂಟೆಯವರೆಗಿನ ಗಡುವು ನೀಡಿದ್ದ ಪುತ್ತಿಗೆ ಶ್ರೀಗಳು ಆಮಂತ್ರಣ ಇನ್ನೂ ಬರದಿರುವ ಹಿನ್ನಲೆಯಲ್ಲಿ ನಾಳೆ (ಜ 17) ಬೆಳಗ್ಗೆ 9 ಗಂಟೆಯಿಂದ ಬುಧವಾರ ( ಜ 18) ಮುಂಜಾನೆ ಐದು ಗಂಟೆಯವರೆಗೆ ರಥಬೀದಿ ಆವರಣದಲ್ಲಿರುವ ಐತಿಹಾಸಿಕ ಅನಂತೇಶ್ವರ ದೇವಾಲದಲ್ಲಿರುವ ಮಧ್ವಾಚಾರ್ಯರು ಅದೃಶ್ಯರಾದ ಸ್ಥಳದ ಮುಂದೆ ಉಪವಾಸ ಸತ್ಯಾಗ್ರಹ ನಡೆಸಲು ನಿರ್ಧರಿಸಿದ್ದಾರೆ.
ನಾಡಿನ ಹಲವು ಸಮಸ್ಯೆಗಳಿಗೆ ಪರಿಹಾರ ನೀಡಿರುವ ಹಿರಿಯ ಪೇಜಾವರ ಶ್ರೀಗಳು ಈ ವಿಷಯದಲ್ಲಿ ಮಧ್ಯಪ್ರವೇಶಿಸಬೇಕಿದೆ. ಅವರು ಗಟ್ಟಿ ಮನಸ್ಸು ಮಾಡಿದರೆ ಈ ಬಿಕ್ಕಟ್ಟಿಗೆ ಪರಿಹಾರ ಖಂಡಿತ. ನಮ್ಮ ಎಲ್ಲಾ ನೋವುಗಳನ್ನು ಶ್ರೀಗಳ ಬಳಿ ಹೇಳಿದ್ದೇವೆ. ಈ ಸಮಸ್ಯೆಗೆ ಅವರಿಂದ ಮಾತ್ರ ಪರಿಹಾರ ಸಾಧ್ಯ. ಸೋದೆ ಶ್ರೀಗಳನ್ನು ಯಾರೋ ದಾರಿ ತಪ್ಪಿಸುತ್ತಿದ್ದಾರೆ ಎಂದು ಪುತ್ತಿಗೆ ಶ್ರೀಗಳು ಬೇಸರ ವ್ಯಕ್ತ ಪಡಿಸಿದ್ದಾರೆ.
ಈ ಬಗ್ಗೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ವಿ ಎಸ್ ಆಚಾರ್ಯ ಹೇಳಿಕೆ ನೀಡಿ, ಸೋದೆ ಶ್ರೀಗಳ ಪಾದಪೂಜೆಯ ಸಂದರ್ಭದಲ್ಲಿ ಈ ಬಗ್ಗೆ ಮಾತನಾಡಿದ್ದೇನೆ. ಅಷ್ಠಮಠಗಳು ಒಂದಾಗಿ ಇದಕ್ಕೆ ಪರಿಹಾರ ಕಾಣಿಕೊಳ್ಳಬೇಕಿದೆ. ಸರಕಾರ ಇದರಲ್ಲಿ ಮಧ್ಯಪ್ರವೇಶಿಸುವುದಿಲ್ಲ ಎಂದು ಹೇಳಿಕೆ ನೀಡಿದ್ದಾರೆ.
ಈಗ ಎಲ್ಲರೂ ಕಣ್ಣು ಪೇಜಾವರ ಶ್ರೀಗಳ ಮೇಲಿದ್ದು, ಶ್ರೀಗಳಿಂದ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ಸದ್ಯಕ್ಕೆ ವ್ಯಕ್ತವಾಗಿಲ್ಲ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications