ಸಿಎಂ ಬೆಂಗಾವಲು ವಾಹನ ಅಪಘಾತ: ಯುವಕ ಸಾವು
ಮಂಗಳೂರು,
ಜ.17: ಮುಖ್ಯಮಂತ್ರಿ ಡಿವಿ ಸದಾನಂದಗೌಡ ಅವರ ಬೆಂಗಾವಲು ವಾಹನ ಡಿಕ್ಕಿ ಹೊಡೆದ ಪರಿಣಾಮ ಮುಡಿಪು ಕಂಬಳಪದವು ನಿವಾಸಿ ಚಂದ್ರಹಾಸ (34) ಮೃತಪಟ್ಟಿದ್ದಾರೆ. ಮಂಗಳವಾರ ಬೆಳಗ್ಗೆ 8.45ರ ಸುಮಾರಿಗೆ ಪಣಂಬೂರು ಸರ್ಕಲ್ ಬಳಿ ಈ ಘಟನೆ ನಡೆದಿದೆ. ಘಟನೆಯಿಂದ ಚಂದ್ರಹಾಸ ಸ್ಥಳದಲ್ಲೇ ಮೃತಪಟ್ಟರೆನ್ನಲಾಗಿದೆ. id="toptextpromo">ಮುಖ್ಯಮಂತ್ರಿ
ಡಿವಿ ಸದಾನಂದ ಗೌಡರು ಪಣಂಬೂರಿನ ಗೋಪಾಲಕೃಷ್ಣ ಭಜನಾ ಮಂದಿರಕ್ಕೆ ಆಗಮಿಸಿ ವಾಪಸ್ ತೆರಳುತ್ತಿದ್ದರು. ಈ ಸಂದರ್ಭ ಬೆಂಗಾವಲು ವಾಹನದ ಸಾಲಿನಲ್ಲಿ ಕೊನೆಯಲ್ಲಿದ್ದ ವಾಹನ ಪಣಂಬೂರು ಸರ್ಕಲ್ ಬಳಿ ರಸ್ತೆ ದಾಟುತ್ತಿದ್ದ ಚಂದ್ರಹಾಸಗೆ ಢೀ ಹೊಡೆಯಿತೆನ್ನಲಾಗಿದೆ. id='are-slot-1' class='oiad oi-axt oiadv'> id='top-searched-articles'>ಮೃತ
ಚಂದ್ರಹಾಸ ಸಿಪಿಸಿ ಟ್ರಾನ್ಸ್ಫೋರ್ಟ್ ಕಂಪನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು ಎನ್ನಲಾಗಿದೆ. ಈ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.











Click it and Unblock the Notifications