ಸಿಎಂ ಬೆಂಗಾವಲು ವಾಹನ ಅಪಘಾತ: ಯುವಕ ಸಾವು

ಮುಖ್ಯಮಂತ್ರಿ ಡಿವಿ ಸದಾನಂದ ಗೌಡರು ಪಣಂಬೂರಿನ ಗೋಪಾಲಕೃಷ್ಣ ಭಜನಾ ಮಂದಿರಕ್ಕೆ ಆಗಮಿಸಿ ವಾಪಸ್ ತೆರಳುತ್ತಿದ್ದರು. ಈ ಸಂದರ್ಭ ಬೆಂಗಾವಲು ವಾಹನದ ಸಾಲಿನಲ್ಲಿ ಕೊನೆಯಲ್ಲಿದ್ದ ವಾಹನ ಪಣಂಬೂರು ಸರ್ಕಲ್ ಬಳಿ ರಸ್ತೆ ದಾಟುತ್ತಿದ್ದ ಚಂದ್ರಹಾಸಗೆ ಢೀ ಹೊಡೆಯಿತೆನ್ನಲಾಗಿದೆ.
ಮೃತ ಚಂದ್ರಹಾಸ ಸಿಪಿಸಿ ಟ್ರಾನ್ಸ್ಫೋರ್ಟ್ ಕಂಪನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು ಎನ್ನಲಾಗಿದೆ. ಈ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.











Click it and Unblock the Notifications