ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಿಎಂ ಬೆಂಗಾವಲು ವಾಹನ ಅಪಘಾತ: ಯುವಕ ಸಾವು

By Srinath
|
Google Oneindia Kannada News

cm-sadananda-gowda-convoy-accident-1-dead-mangalore
ಮಂಗಳೂರು, ಜ.17: ಮುಖ್ಯಮಂತ್ರಿ ಡಿವಿ ಸದಾನಂದಗೌಡ ಅವರ ಬೆಂಗಾವಲು ವಾಹನ ಡಿಕ್ಕಿ ಹೊಡೆದ ಪರಿಣಾಮ ಮುಡಿಪು ಕಂಬಳಪದವು ನಿವಾಸಿ ಚಂದ್ರಹಾಸ (34) ಮೃತಪಟ್ಟಿದ್ದಾರೆ. ಮಂಗಳವಾರ ಬೆಳಗ್ಗೆ 8.45ರ ಸುಮಾರಿಗೆ ಪಣಂಬೂರು ಸರ್ಕಲ್ ಬಳಿ ಈ ಘಟನೆ ನಡೆದಿದೆ. ಘಟನೆಯಿಂದ ಚಂದ್ರಹಾಸ ಸ್ಥಳದಲ್ಲೇ ಮೃತಪಟ್ಟರೆನ್ನಲಾಗಿದೆ.

ಮುಖ್ಯಮಂತ್ರಿ ಡಿವಿ ಸದಾನಂದ ಗೌಡರು ಪಣಂಬೂರಿನ ಗೋಪಾಲಕೃಷ್ಣ ಭಜನಾ ಮಂದಿರಕ್ಕೆ ಆಗಮಿಸಿ ವಾಪಸ್ ತೆರಳುತ್ತಿದ್ದರು. ಈ ಸಂದರ್ಭ ಬೆಂಗಾವಲು ವಾಹನದ ಸಾಲಿನಲ್ಲಿ ಕೊನೆಯಲ್ಲಿದ್ದ ವಾಹನ ಪಣಂಬೂರು ಸರ್ಕಲ್ ಬಳಿ ರಸ್ತೆ ದಾಟುತ್ತಿದ್ದ ಚಂದ್ರಹಾಸಗೆ ಢೀ ಹೊಡೆಯಿತೆನ್ನಲಾಗಿದೆ.

ಮೃತ ಚಂದ್ರಹಾಸ ಸಿಪಿಸಿ ಟ್ರಾನ್ಸ್‌ಫೋರ್ಟ್ ಕಂಪನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು ಎನ್ನಲಾಗಿದೆ. ಈ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

English summary
Karnataka CM Sadananda Gowda convoy accident 1dead Mangalore on Jan 17 Morning at 8.45. The dead has been identified as Chandrahasa (34).
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X