ಸಿಎಂ ಬೆಂಗಾವಲು ವಾಹನ ಅಪಘಾತ: ಯುವಕ ಸಾವು

cm-sadananda-gowda-convoy-accident-1-dead-mangalore
ಮಂಗಳೂರು, ಜ.17: ಮುಖ್ಯಮಂತ್ರಿ ಡಿವಿ ಸದಾನಂದಗೌಡ ಅವರ ಬೆಂಗಾವಲು ವಾಹನ ಡಿಕ್ಕಿ ಹೊಡೆದ ಪರಿಣಾಮ ಮುಡಿಪು ಕಂಬಳಪದವು ನಿವಾಸಿ ಚಂದ್ರಹಾಸ (34) ಮೃತಪಟ್ಟಿದ್ದಾರೆ. ಮಂಗಳವಾರ ಬೆಳಗ್ಗೆ 8.45ರ ಸುಮಾರಿಗೆ ಪಣಂಬೂರು ಸರ್ಕಲ್ ಬಳಿ ಈ ಘಟನೆ ನಡೆದಿದೆ. ಘಟನೆಯಿಂದ ಚಂದ್ರಹಾಸ ಸ್ಥಳದಲ್ಲೇ ಮೃತಪಟ್ಟರೆನ್ನಲಾಗಿದೆ.

ಮುಖ್ಯಮಂತ್ರಿ ಡಿವಿ ಸದಾನಂದ ಗೌಡರು ಪಣಂಬೂರಿನ ಗೋಪಾಲಕೃಷ್ಣ ಭಜನಾ ಮಂದಿರಕ್ಕೆ ಆಗಮಿಸಿ ವಾಪಸ್ ತೆರಳುತ್ತಿದ್ದರು. ಈ ಸಂದರ್ಭ ಬೆಂಗಾವಲು ವಾಹನದ ಸಾಲಿನಲ್ಲಿ ಕೊನೆಯಲ್ಲಿದ್ದ ವಾಹನ ಪಣಂಬೂರು ಸರ್ಕಲ್ ಬಳಿ ರಸ್ತೆ ದಾಟುತ್ತಿದ್ದ ಚಂದ್ರಹಾಸಗೆ ಢೀ ಹೊಡೆಯಿತೆನ್ನಲಾಗಿದೆ.

ಮೃತ ಚಂದ್ರಹಾಸ ಸಿಪಿಸಿ ಟ್ರಾನ್ಸ್‌ಫೋರ್ಟ್ ಕಂಪನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು ಎನ್ನಲಾಗಿದೆ. ಈ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+