ಜಯನಗರ ಬಸ್ ನಿಲ್ದಾಣ ಸ್ಥಳಾಂತರ- ಅವಾಂತರ

ಮಾರೇನಹಳ್ಳಿ ಪೆಟ್ರೋಲ್ ಬಂಕ್ ಇದ್ದ ಜಾಗದಲ್ಲಿ 9ನೇ ಬ್ಲಾಕಿನ ಬಸ್ ನಿಲ್ದಾಣ ಸ್ಥಳಾಂತರಗೊಂಡಿದ್ದು ಶಾಸಕ ವಿಜಯ ಕುಮಾರ್ ಹಾಗೂ ಮಾಜಿ ಮೇಯರ್ ಎಸ್ ಕೆ ನಟರಾಜ್ ಸೊಮವಾರ ಉದ್ಘಾಟಿಸಿದ್ದರು.
ದಿನಕ್ಕೆ ಸುಮಾರು 456 ಟ್ರಿಪ್ ಹಾಗೂ 40 ಶೆಡ್ಯೂಲ್ ನಲ್ಲಿ ಬಿಎಂಟಿಸಿ ವಾಹನಗಳು ಈ ನಿಲ್ದಾಣದಿಂದ ಚಲಿಸಲಿದೆ. ಹಳೆ ನಿಲ್ದಾಣದಿಂದ ಸಂಚಾರ ದಟ್ಟಣೆ, ಸಮಸ್ಯೆ ಅಧಿಕವಾದ ಕಾರಣ ಹೊಸ ಜಾಗಕ್ಕೆ ಸ್ಥಳಾಂತರಿಸುವುದು ಅನಿವಾರ್ಯವಾಗಿತ್ತು ಎಂದು ಸಂಚಾರ ಇಲಾಖೆ ಪೊಲೀಸರು ಹೇಳಿದ್ದಾರೆ.
ಹಳೆ ನಿಲ್ದಾಣದ ಸುತ್ತಮುತ್ತ ವಾಸಿಸುತ್ತಿರುವ ನಾಗರೀಕರು ರಾತ್ರಿ ಪಾಳೆಯದಲ್ಲಿ ಅಡ್ಡಾದಿಡ್ಡಿ ಬಸ್ ನಿಲುಗಡೆ ಬಗ್ಗೆ ದೂರು ನೀಡಿದ್ದರು. ಬೆಳಗ್ಗೆ ಸಂಚಾರ ಸಮಸ್ಯೆ ಉಂಟಾಗಿ ಎಲ್ಲರಿಗೂ ಕಿರಿಕಿರಿಯಾಗುತ್ತಿತ್ತು.
ಈ ನಿಟ್ಟಿನಲ್ಲಿ ಸ್ಥಳೀಯ ನಿವಾಸಿಗಳು, ಬಿಎಂಟಿಸಿ ಅಧಿಕಾರಿಗಳ ಜೊತೆ ಚರ್ಚಿಸಿ ಸ್ಥಳಾಂತರವೇ ಸೂಕ್ತ ಎಂದು ತೀರ್ಮಾನಿಸಲಾಯಿತು ಎಂದು ಜಯನಗರ ವಾರ್ಡ್ ನ ಬಿಬಿಎಂಪಿ ಸದಸ್ಯ ಸಿಕೆ ರಾಮಮೂರ್ತಿ ಹೇಳಿದ್ದಾರೆ.
ಸ್ಥಳಾಂತರಕ್ಕೆ ವಿರೋಧ: ಕನ್ನಡ ಅಭಿಮಾನಿಗಳ ಸಂಘದ ಅಧ್ಯಕ್ಷ ಜೈರಾಮ್ ಅವರು ಬಸ್ ನಿಲ್ದಾಣ ಸ್ಥಳಾಂತರಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಸ್ಥಳೀಯ ಸಣ್ಣ ಉದ್ಯಮಿಗಳಿಗೆ, ತಳ್ಳುಗಾಡಿ ವ್ಯಾಪಾರಿಗಳಿಗೆ ಬಸ್ ಸ್ಥಳಾಂತರದಿಂದ ಭಾರಿ ನಷ್ಟವಾಗಲಿದೆ. ನಮ್ಮ ಸಂಘಟನೆ ಸ್ಥಳಾಂತರವನ್ನು ವಿರೋಧಿಸಿ, ಪ್ರತಿಭಟನೆ ನಡೆಸಲು ಯೋಜಿಸಿದೆ ಎಂದಿದ್ದಾರೆ.
ಆದರೆ, ಹೊಸ ನಿಲ್ದಾಣದಲ್ಲಿ ಶೌಚಾಲಯ, ಪಾರ್ಕಿಂಗ್ ವ್ಯವಸ್ಥೆ ಇದೆ. ಮೆಟ್ರೋ ಸ್ಟೇಷನ್ ಗೂ ಹತ್ತಿರವಾಗುತ್ತೆ ಹಾಗಾಗಿ ಸ್ಥಳಾಂತರಗೊಂಡಿದ್ದು ಒಳ್ಳೆಯದು ಇನ್ನು ಕೆಲವರು ವಾದಿಸುತ್ತಾರೆ. ಟ್ರಾಫಿಕ್ ಪೊಲೀಸರು ಕೂಡಾ ಸ್ಥಳಾಂತರದ ಪರವಾಗಿ ನಿಂತಿದ್ದಾರೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications