ಜಯನಗರ ಬಸ್ ನಿಲ್ದಾಣ ಸ್ಥಳಾಂತರ- ಅವಾಂತರ

ಮಾರೇನಹಳ್ಳಿ ಪೆಟ್ರೋಲ್ ಬಂಕ್ ಇದ್ದ ಜಾಗದಲ್ಲಿ 9ನೇ ಬ್ಲಾಕಿನ ಬಸ್ ನಿಲ್ದಾಣ ಸ್ಥಳಾಂತರಗೊಂಡಿದ್ದು ಶಾಸಕ ವಿಜಯ ಕುಮಾರ್ ಹಾಗೂ ಮಾಜಿ ಮೇಯರ್ ಎಸ್ ಕೆ ನಟರಾಜ್ ಸೊಮವಾರ ಉದ್ಘಾಟಿಸಿದ್ದರು.
ದಿನಕ್ಕೆ ಸುಮಾರು 456 ಟ್ರಿಪ್ ಹಾಗೂ 40 ಶೆಡ್ಯೂಲ್ ನಲ್ಲಿ ಬಿಎಂಟಿಸಿ ವಾಹನಗಳು ಈ ನಿಲ್ದಾಣದಿಂದ ಚಲಿಸಲಿದೆ. ಹಳೆ ನಿಲ್ದಾಣದಿಂದ ಸಂಚಾರ ದಟ್ಟಣೆ, ಸಮಸ್ಯೆ ಅಧಿಕವಾದ ಕಾರಣ ಹೊಸ ಜಾಗಕ್ಕೆ ಸ್ಥಳಾಂತರಿಸುವುದು ಅನಿವಾರ್ಯವಾಗಿತ್ತು ಎಂದು ಸಂಚಾರ ಇಲಾಖೆ ಪೊಲೀಸರು ಹೇಳಿದ್ದಾರೆ.
ಹಳೆ ನಿಲ್ದಾಣದ ಸುತ್ತಮುತ್ತ ವಾಸಿಸುತ್ತಿರುವ ನಾಗರೀಕರು ರಾತ್ರಿ ಪಾಳೆಯದಲ್ಲಿ ಅಡ್ಡಾದಿಡ್ಡಿ ಬಸ್ ನಿಲುಗಡೆ ಬಗ್ಗೆ ದೂರು ನೀಡಿದ್ದರು. ಬೆಳಗ್ಗೆ ಸಂಚಾರ ಸಮಸ್ಯೆ ಉಂಟಾಗಿ ಎಲ್ಲರಿಗೂ ಕಿರಿಕಿರಿಯಾಗುತ್ತಿತ್ತು.
ಈ ನಿಟ್ಟಿನಲ್ಲಿ ಸ್ಥಳೀಯ ನಿವಾಸಿಗಳು, ಬಿಎಂಟಿಸಿ ಅಧಿಕಾರಿಗಳ ಜೊತೆ ಚರ್ಚಿಸಿ ಸ್ಥಳಾಂತರವೇ ಸೂಕ್ತ ಎಂದು ತೀರ್ಮಾನಿಸಲಾಯಿತು ಎಂದು ಜಯನಗರ ವಾರ್ಡ್ ನ ಬಿಬಿಎಂಪಿ ಸದಸ್ಯ ಸಿಕೆ ರಾಮಮೂರ್ತಿ ಹೇಳಿದ್ದಾರೆ.
ಸ್ಥಳಾಂತರಕ್ಕೆ ವಿರೋಧ: ಕನ್ನಡ ಅಭಿಮಾನಿಗಳ ಸಂಘದ ಅಧ್ಯಕ್ಷ ಜೈರಾಮ್ ಅವರು ಬಸ್ ನಿಲ್ದಾಣ ಸ್ಥಳಾಂತರಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಸ್ಥಳೀಯ ಸಣ್ಣ ಉದ್ಯಮಿಗಳಿಗೆ, ತಳ್ಳುಗಾಡಿ ವ್ಯಾಪಾರಿಗಳಿಗೆ ಬಸ್ ಸ್ಥಳಾಂತರದಿಂದ ಭಾರಿ ನಷ್ಟವಾಗಲಿದೆ. ನಮ್ಮ ಸಂಘಟನೆ ಸ್ಥಳಾಂತರವನ್ನು ವಿರೋಧಿಸಿ, ಪ್ರತಿಭಟನೆ ನಡೆಸಲು ಯೋಜಿಸಿದೆ ಎಂದಿದ್ದಾರೆ.
ಆದರೆ, ಹೊಸ ನಿಲ್ದಾಣದಲ್ಲಿ ಶೌಚಾಲಯ, ಪಾರ್ಕಿಂಗ್ ವ್ಯವಸ್ಥೆ ಇದೆ. ಮೆಟ್ರೋ ಸ್ಟೇಷನ್ ಗೂ ಹತ್ತಿರವಾಗುತ್ತೆ ಹಾಗಾಗಿ ಸ್ಥಳಾಂತರಗೊಂಡಿದ್ದು ಒಳ್ಳೆಯದು ಇನ್ನು ಕೆಲವರು ವಾದಿಸುತ್ತಾರೆ. ಟ್ರಾಫಿಕ್ ಪೊಲೀಸರು ಕೂಡಾ ಸ್ಥಳಾಂತರದ ಪರವಾಗಿ ನಿಂತಿದ್ದಾರೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications