ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶಾಸಕ ಕೃಷ್ಣಪ್ಪ ಕುಟುಂಬದ ಮೇಲೆ ಲೋಕಾಯುಕ್ತ ತನಿಖೆ

By Mahesh
|
Google Oneindia Kannada News

Lokayukta probe on MLA Priyakrishna family
ಬೆಂಗಳೂರು, ಜ.16: ಆದಾಯಕ್ಕಿಂತ ಹೆಚ್ಚಿನ ಆಸ್ತಿಗಳಿಸಿರುವ ಆರೋಪಕ್ಕೆ ಸಂಬಂಧಪಟ್ಟಂತೆ ಕಾಂಗ್ರೆಸ್ ಶಾಸಕ ಎಂ.ಕೃಷ್ಣಪ್ಪ ಹಾಗೂ ಕುಟುಂಬದ ಸದಸ್ಯರ ವಿರುದ್ಧ ತನಿಖೆ ನಡೆಸಲು ಲೋಕಾಯುಕ್ತ ವಿಶೇಷ ಕೋರ್ಟ್ ನ್ಯಾ. ಸುಧೀಂದ್ರರಾವ್ ಸೋಮವಾರ(ಜ.16) ಆದೇಶಿಸಿದ್ದಾರೆ.

ಕಾಂಗ್ರೆಸ್ ಶಾಸಕ ಕೃಷ್ಣಪ್ಪ ಅವರ ಕುಟುಂಬದ ಮೇಲೆ ವಕೀಲ ಪ್ರಕಾಶ್ ಸಲ್ಲಿಸಿರುವ ದೂರಿನಲ್ಲಿ ಮಾಡಲಾಗಿರುವ ಆರೋಪಗಳು ತನಿಖೆಗೆ ಸೂಕ್ತ ಹಾಗೂ ಅರ್ಹವಾಗಿದೆ ಎಂದು ನ್ಯಾ ಸುಧೀಂದ್ರರಾವ್ ಪರಿಗಣಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಶಾಸಕ ಎಂ.ಕೃಷ್ಣಪ್ಪ ಮತ್ತವರ ಪತ್ನಿ ಪ್ರಿಯದರ್ಶಿನಿ, ಪುತ್ರರಾದ ಪ್ರಿಯಕೃಷ್ಣ ಹಾಗೂ ಪ್ರದೀಪ್ ವಿರುದ್ಧ ಅಪರಾಧ ದಂಡ ಪ್ರಕಿಯಾ ಸಂಹಿತೆ ಕಾಯ್ದೆ (ಸಿಆರ್‌ಪಿಸಿ) ಸೆಕ್ಷನ್ 156(3)ರಡಿ ಎಫ್‌ಐಆರ್ ದಾಖಲಿಸಿ, ತನಿಖೆ ನಡೆಸುವಂತೆ ನಗರ ಲೋಕಾಯುಕ್ತ ಪೊಲೀಸ್ ಅಧೀಕ್ಷರಿಗೆ ಆದೇಶಿಸಿದ ನ್ಯಾಯಾಧೀಶರು, ತನಿಖಾ ವರದಿಯನ್ನು ಫೆ.17ರಂದು ಸಲ್ಲಿಸುವಂತೆ ನಿರ್ದೇಶಿಸಿದ್ದಾರೆ.

ಲೋಕಾಯುಕ್ತ ಕೋರ್ಟ್‌ನ ಈ ಆದೇಶದಿಂದ ರಾಜ್ಯ ರಾಜಕೀಯದ ಮತ್ತೊಂದು ಕುಟುಂಬದ ಮೇಲೆ ಪೊಲೀಸ್ ತನಿಖೆಗೆ ಆದೇಶ ನೀಡಲಾಗಿದೆ. ಎಲ್ಲ ಆರೋಪಿಗಳ ವಿರುದ್ಧ ಶೀಘ್ರವೇ ಎಫ್‌ಐಆರ್ ದಾಖಲಾಗುವ ಸಾಧ್ಯತೆಯಿದೆ.

English summary
Lokayukta court judge Sudhindra Rao has ordered probe against Congress MLA M Krishnappa and his wife Priyadarshini, MLA Priya Krishna and Pradeep Krishna in illegal assets case. Earlier Bangalore based advocate HC Prakash lodged a private complaint against them in Lokayukta court on (Jan.9)
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X