ಗೌಡರ ಮಧ್ಯಸ್ಥಿಕೆಯಲ್ಲಿ ಉಡುಪಿಮಠ ಜಗಳ ಇತ್ಯರ್ಥ

ಪುತ್ತಿಗೆ ಶ್ರೀಗಳ ಅನುಪಸ್ಥಿತಿಯಲ್ಲಿ ಜೋಡುಕಟ್ಟೆ ವೃತ್ತದಿಂದ ಅತ್ಯಂತ ವಿಜೃಂಭಣೆಯಿಂದ ಆರಂಭವಾದ ಪರ್ಯಾಯ ಮೆರವಣಿಗೆಯಲ್ಲಿ ಲಕ್ಷಾಂತರ ಭಕ್ತಾದಿಗಳು ಭಾಗವಹಿಸಿದ್ದರು. ರಾಜ್ಯದ ವಿವಿಧ ಕಲೆಗಳನ್ನು ಬಿಂಬಿಸುವ ಟ್ಯಾಬ್ಲೋಗಳು, ವೀರಗಾಸೆ, ಡೊಳ್ಳು ಕುಣಿತ, ಹುಲಿವೇಷ, ಯಕ್ಷಗಾನ ಮುಂತಾದವುಗಳು ಜನರನ್ನು ರಂಜಿಸಿದವು. ಅಷ್ಟಮಠದಲ್ಲಿ 7ಮಠದ ಯತಿಗಳು, ಸಿಎಂ ಸದಾನಂದ ಗೌಡ, ಸಚಿವ ರಾಮದಾಸ್, ವಿ ಎಸ್ ಆಚಾರ್ಯ, ಜಿಲ್ಲೆಯ ಶಾಸಕರುಗಳು ಈ ಭವ್ಯ ಮೆರವಣಿಗೆಗೆ ಸಾಕ್ಷಿಯಾದರು.
ಅನಂತೇಶ್ವರ, ಚಂದ್ರಮೌಳೀಶ್ವರ ದೇವರಿಗೆ ಪ್ರಾರ್ಥನೆ ಸಲ್ಲಿಸಿ ಕನಕನ ಕಿಂಡಿಯ ಮೂಲಕ ಶ್ರೀಕೃಷ್ಣನ ದರ್ಶನ ಮಾಡಿದ ಸೋದೆಶ್ರೀಗಳು ಕೃಷ್ಣ ಮಠ ಪ್ರವೇಶಿಸಿ ಶ್ರೀಕೃಷ್ಣ, ಮುಖ್ಯಪ್ರಾಣ, ಗರುಡ ದೇವರಿಗೆ ಮತ್ತು ಭೋಜನಶಾಲೆಯಲ್ಲಿರುವ ಮುಖ್ಯಪ್ರಾಣನಿಗೆ ಪೂಜೆ ಸಲ್ಲಿಸಿದ್ದಾರೆ. ಹಿರಿಯ ಯತಿಗಳ ಆಶೀರ್ವಾದ ಪಡೆದ 21 ವರ್ಷ (ಮಾರ್ಚ್ 1991ರಲ್ಲಿ ಜನನ) ವಯಸ್ಸಿನ ಸೋದೆ ಶ್ರೀಗಳು ಮಠದ ಆವರಣದ ಬಡಗುಮಾಲೆಯಲ್ಲಿ ಇತರ ಧಾರ್ಮಿಕ ವಿಧಿವಿಧಾನ ಪೂರೈಸಿದ್ದಾರೆ.
ಪರ್ಯಾಯ ದರ್ಬಾರ್ ನಡೆಯುತ್ತಿದ್ದು ಪುತ್ತಿಗೆ ಶ್ರೀಗಳ ಜೊತೆ ಅದಮಾರು ಶ್ರೀಗಳು ಇದರಲ್ಲಿ ಭಾಗವಹಿಸದೇ ಇರುವುದು ಅಷ್ಟಮಠಗಳಲ್ಲಿ ಎಲ್ಲವೂ ಸರಿಯಿಲ್ಲ ಇನ್ನುವ ಭಾವನೆ ಭಕ್ತಾದಿಗಳಲ್ಲಿ ಮೂಡಿದೆ.
ಉಪವಾಸ: ಮಂಗಳವಾರ (ಜ 17) ರಾತ್ರಿ ಪುತ್ತಿಗೆ ಮತ್ತು ಪೇಜಾವರ ಶ್ರೀಗಳು ತಾವು ನಡೆಸುತ್ತಿದ್ದ ಉಪವಾಸವನ್ನು ಕೈಬಿಟ್ಟಿದ್ದಾರೆ. ಅನಂತೇಶ್ವರ ಆವರಣದಲ್ಲಿ ಉಪವಾಸ ಕೂತಿದ್ದ ಪುತ್ತಿಗೆ ಶ್ರೀಗಳ ಜೊತೆ ಮಾತುಕತೆ ನಡೆಸಿದ ಸಿಎಂ ಸದಾನಂದ ಗೌಡ ಅವರ ಮನವೊಲಿಸುವಲ್ಲಿ ಯಶಸ್ವಿಯಾದರು. ಪುತ್ತಿಗೆ ಶ್ರೀಗಳು ಉಪವಾಸ ಕೈಬಿಟ್ಟ ಬೆನ್ನಲ್ಲೇ ಪೇಜಾವರ ಶ್ರೀಗಳು ಉಪವಾಸ ಹಿಂತೆಗೆದು ಕೊಂಡಿದ್ದಾರೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications