ಗೌಡರ ಮಧ್ಯಸ್ಥಿಕೆಯಲ್ಲಿ ಉಡುಪಿಮಠ ಜಗಳ ಇತ್ಯರ್ಥ

ಪುತ್ತಿಗೆ ಶ್ರೀಗಳ ಅನುಪಸ್ಥಿತಿಯಲ್ಲಿ ಜೋಡುಕಟ್ಟೆ ವೃತ್ತದಿಂದ ಅತ್ಯಂತ ವಿಜೃಂಭಣೆಯಿಂದ ಆರಂಭವಾದ ಪರ್ಯಾಯ ಮೆರವಣಿಗೆಯಲ್ಲಿ ಲಕ್ಷಾಂತರ ಭಕ್ತಾದಿಗಳು ಭಾಗವಹಿಸಿದ್ದರು. ರಾಜ್ಯದ ವಿವಿಧ ಕಲೆಗಳನ್ನು ಬಿಂಬಿಸುವ ಟ್ಯಾಬ್ಲೋಗಳು, ವೀರಗಾಸೆ, ಡೊಳ್ಳು ಕುಣಿತ, ಹುಲಿವೇಷ, ಯಕ್ಷಗಾನ ಮುಂತಾದವುಗಳು ಜನರನ್ನು ರಂಜಿಸಿದವು. ಅಷ್ಟಮಠದಲ್ಲಿ 7ಮಠದ ಯತಿಗಳು, ಸಿಎಂ ಸದಾನಂದ ಗೌಡ, ಸಚಿವ ರಾಮದಾಸ್, ವಿ ಎಸ್ ಆಚಾರ್ಯ, ಜಿಲ್ಲೆಯ ಶಾಸಕರುಗಳು ಈ ಭವ್ಯ ಮೆರವಣಿಗೆಗೆ ಸಾಕ್ಷಿಯಾದರು.
ಅನಂತೇಶ್ವರ, ಚಂದ್ರಮೌಳೀಶ್ವರ ದೇವರಿಗೆ ಪ್ರಾರ್ಥನೆ ಸಲ್ಲಿಸಿ ಕನಕನ ಕಿಂಡಿಯ ಮೂಲಕ ಶ್ರೀಕೃಷ್ಣನ ದರ್ಶನ ಮಾಡಿದ ಸೋದೆಶ್ರೀಗಳು ಕೃಷ್ಣ ಮಠ ಪ್ರವೇಶಿಸಿ ಶ್ರೀಕೃಷ್ಣ, ಮುಖ್ಯಪ್ರಾಣ, ಗರುಡ ದೇವರಿಗೆ ಮತ್ತು ಭೋಜನಶಾಲೆಯಲ್ಲಿರುವ ಮುಖ್ಯಪ್ರಾಣನಿಗೆ ಪೂಜೆ ಸಲ್ಲಿಸಿದ್ದಾರೆ. ಹಿರಿಯ ಯತಿಗಳ ಆಶೀರ್ವಾದ ಪಡೆದ 21 ವರ್ಷ (ಮಾರ್ಚ್ 1991ರಲ್ಲಿ ಜನನ) ವಯಸ್ಸಿನ ಸೋದೆ ಶ್ರೀಗಳು ಮಠದ ಆವರಣದ ಬಡಗುಮಾಲೆಯಲ್ಲಿ ಇತರ ಧಾರ್ಮಿಕ ವಿಧಿವಿಧಾನ ಪೂರೈಸಿದ್ದಾರೆ.
ಪರ್ಯಾಯ ದರ್ಬಾರ್ ನಡೆಯುತ್ತಿದ್ದು ಪುತ್ತಿಗೆ ಶ್ರೀಗಳ ಜೊತೆ ಅದಮಾರು ಶ್ರೀಗಳು ಇದರಲ್ಲಿ ಭಾಗವಹಿಸದೇ ಇರುವುದು ಅಷ್ಟಮಠಗಳಲ್ಲಿ ಎಲ್ಲವೂ ಸರಿಯಿಲ್ಲ ಇನ್ನುವ ಭಾವನೆ ಭಕ್ತಾದಿಗಳಲ್ಲಿ ಮೂಡಿದೆ.
ಉಪವಾಸ: ಮಂಗಳವಾರ (ಜ 17) ರಾತ್ರಿ ಪುತ್ತಿಗೆ ಮತ್ತು ಪೇಜಾವರ ಶ್ರೀಗಳು ತಾವು ನಡೆಸುತ್ತಿದ್ದ ಉಪವಾಸವನ್ನು ಕೈಬಿಟ್ಟಿದ್ದಾರೆ. ಅನಂತೇಶ್ವರ ಆವರಣದಲ್ಲಿ ಉಪವಾಸ ಕೂತಿದ್ದ ಪುತ್ತಿಗೆ ಶ್ರೀಗಳ ಜೊತೆ ಮಾತುಕತೆ ನಡೆಸಿದ ಸಿಎಂ ಸದಾನಂದ ಗೌಡ ಅವರ ಮನವೊಲಿಸುವಲ್ಲಿ ಯಶಸ್ವಿಯಾದರು. ಪುತ್ತಿಗೆ ಶ್ರೀಗಳು ಉಪವಾಸ ಕೈಬಿಟ್ಟ ಬೆನ್ನಲ್ಲೇ ಪೇಜಾವರ ಶ್ರೀಗಳು ಉಪವಾಸ ಹಿಂತೆಗೆದು ಕೊಂಡಿದ್ದಾರೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications