ದೆಹಲಿಯಲ್ಲಿ ಗೌರೀಶ್ ಕಾಯ್ಕಿಣಿ ಜನ್ಮ ಶತಮಾನೋತ್ಸವ

ಜ.21ರ ಸಂಜೆ 5 ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಸಾಹಿತ್ಯ ಅಕಾಡೆಮಿಯ ಕನ್ನಡ ಸಲಹಾ ಮಂಡಳಿಯ ಸದಸ್ಯರಾದ ಕೆ. ಮರುಳಸಿದ್ದಪ್ಪ ಅವರು ಉದ್ಘಾಟಿಸಲಿದ್ದಾರೆ. ಕನ್ನಡಕ್ಕೆ 8ನೇ ಜ್ಞಾನಪೀಠ ಪ್ರಶಸ್ತಿ ತಂದುಕೊಂಡ ಲೇಖಕ ಡಾ. ಚಂದ್ರಶೇಖರ ಕಂಬಾರ ಮತ್ತು ವಿಮರ್ಶಕ ಸಿಎನ್ ರಾಮಚಂದ್ರ ಅವರು ಗೌರವ ಅತಿಥಿಗಳಾಗಿ ಭಾಗವಹಿಸುತ್ತಿದ್ದಾರೆ.
ಕೇಂದ್ರ ಕಾರ್ಪೊರೇಟ್ ಸಚಿವರಾಗಿರುವ ಡಾ. ವೀರಪ್ಪ ಮೊಯ್ಲಿ ಅವರು ಅಧ್ಯಕ್ಷತೆ ವಹಿಸುತ್ತಿದ್ದು, ದೆಹಲಿ ಕರ್ನಾಟಕ ಸಂಘದ ಅಧ್ಯಕ್ಷರಾದ ವೆಂಕಟಾಚಲ ಹೆಗಡೆ ಅವರು ಪ್ರಾಸ್ತಾವಿಕ ನುಡಿಗಳನ್ನು ಆಡಲಿದ್ದಾರೆ. ಉದ್ಘಾಟನೆಯ ನಂತರ ಗೌರೀಶ್ ಕಾಯ್ಕಿಣಿ ಅವರು ರಚಿಸಿದ ನಾಟಕ 'ಅತ್ತೆಗೆ ಲತ್ತೆ'ವನ್ನು ಸಂಜೆ 6 ಗಂಟೆಗೆ ದೆಹಲಿ ಕರ್ನಾಟಕ ಸಂಘದವರು ಪ್ರಸ್ತುತಪಡಿಸುತ್ತಿದ್ದಾರೆ.
ಮರುದಿನ ಜ.22ರಂದು ಬೆಳಿಗ್ಗೆ 10.30ರಿಂದ ಗೌರೀಶ್ ಕಾಯ್ಕಿಣಿಯವರ ವೈಚಾರಿಕ ಬರಹಗಳ ಬಗ್ಗೆ ಗೋಷ್ಠಿಗಳು ನಡೆಯಲಿವೆ. ಗೌರೀಶ್ ಅವರ ಮಗ ಸಾಹಿತಿ ಜಯಂತ್ ಕಾಯ್ಕಿಣಿ ಅವರು ತಮ್ಮ ತಂದೆಯ ವ್ಯಕ್ತಿತ್ವದ ಬಗ್ಗೆ ಅನಿಸಿಕೆ, ಅನುಭವಗಳನ್ನು ಹಂಚಿಕೊಳ್ಳಲಿದ್ದಾರೆ. ಸಂಜೆ 4 ಗಂಟೆಗೆ ಕು.ಸೃಜನ ಕಾಯ್ಕಿಣಿ ಅವರಿಂದ ಓಡಿಸ್ಸಿ ನೃತ್ಯ ಮತ್ತು 5 ಗಂಟೆಗೆ ಹೊಸಕೋಟೆಯ ಜನಪದರು ರಂಗತಂಡದಿಂದ ಕಂಬಾರರ 'ಸಾಂಬಶಿವ ಪ್ರಹಸನ' ನಾಟಕ ಆಡಲಿದ್ದಾರೆ.
ಸಮಾರಂಭ ನಡೆಯುವ ಸ್ಥಳ : ದೆಹಲಿ ಕರ್ನಾಟಕ ಸಂಘ, ಸೆಕ್ಟರ್-12, ಆರ್.ಕೆ.ಪುರಂ, ನವದೆಹಲಿ - 110 022.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications