ದೆಹಲಿಯಲ್ಲಿ ಗೌರೀಶ್ ಕಾಯ್ಕಿಣಿ ಜನ್ಮ ಶತಮಾನೋತ್ಸವ

ಜ.21ರ ಸಂಜೆ 5 ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಸಾಹಿತ್ಯ ಅಕಾಡೆಮಿಯ ಕನ್ನಡ ಸಲಹಾ ಮಂಡಳಿಯ ಸದಸ್ಯರಾದ ಕೆ. ಮರುಳಸಿದ್ದಪ್ಪ ಅವರು ಉದ್ಘಾಟಿಸಲಿದ್ದಾರೆ. ಕನ್ನಡಕ್ಕೆ 8ನೇ ಜ್ಞಾನಪೀಠ ಪ್ರಶಸ್ತಿ ತಂದುಕೊಂಡ ಲೇಖಕ ಡಾ. ಚಂದ್ರಶೇಖರ ಕಂಬಾರ ಮತ್ತು ವಿಮರ್ಶಕ ಸಿಎನ್ ರಾಮಚಂದ್ರ ಅವರು ಗೌರವ ಅತಿಥಿಗಳಾಗಿ ಭಾಗವಹಿಸುತ್ತಿದ್ದಾರೆ.
ಕೇಂದ್ರ ಕಾರ್ಪೊರೇಟ್ ಸಚಿವರಾಗಿರುವ ಡಾ. ವೀರಪ್ಪ ಮೊಯ್ಲಿ ಅವರು ಅಧ್ಯಕ್ಷತೆ ವಹಿಸುತ್ತಿದ್ದು, ದೆಹಲಿ ಕರ್ನಾಟಕ ಸಂಘದ ಅಧ್ಯಕ್ಷರಾದ ವೆಂಕಟಾಚಲ ಹೆಗಡೆ ಅವರು ಪ್ರಾಸ್ತಾವಿಕ ನುಡಿಗಳನ್ನು ಆಡಲಿದ್ದಾರೆ. ಉದ್ಘಾಟನೆಯ ನಂತರ ಗೌರೀಶ್ ಕಾಯ್ಕಿಣಿ ಅವರು ರಚಿಸಿದ ನಾಟಕ 'ಅತ್ತೆಗೆ ಲತ್ತೆ'ವನ್ನು ಸಂಜೆ 6 ಗಂಟೆಗೆ ದೆಹಲಿ ಕರ್ನಾಟಕ ಸಂಘದವರು ಪ್ರಸ್ತುತಪಡಿಸುತ್ತಿದ್ದಾರೆ.
ಮರುದಿನ ಜ.22ರಂದು ಬೆಳಿಗ್ಗೆ 10.30ರಿಂದ ಗೌರೀಶ್ ಕಾಯ್ಕಿಣಿಯವರ ವೈಚಾರಿಕ ಬರಹಗಳ ಬಗ್ಗೆ ಗೋಷ್ಠಿಗಳು ನಡೆಯಲಿವೆ. ಗೌರೀಶ್ ಅವರ ಮಗ ಸಾಹಿತಿ ಜಯಂತ್ ಕಾಯ್ಕಿಣಿ ಅವರು ತಮ್ಮ ತಂದೆಯ ವ್ಯಕ್ತಿತ್ವದ ಬಗ್ಗೆ ಅನಿಸಿಕೆ, ಅನುಭವಗಳನ್ನು ಹಂಚಿಕೊಳ್ಳಲಿದ್ದಾರೆ. ಸಂಜೆ 4 ಗಂಟೆಗೆ ಕು.ಸೃಜನ ಕಾಯ್ಕಿಣಿ ಅವರಿಂದ ಓಡಿಸ್ಸಿ ನೃತ್ಯ ಮತ್ತು 5 ಗಂಟೆಗೆ ಹೊಸಕೋಟೆಯ ಜನಪದರು ರಂಗತಂಡದಿಂದ ಕಂಬಾರರ 'ಸಾಂಬಶಿವ ಪ್ರಹಸನ' ನಾಟಕ ಆಡಲಿದ್ದಾರೆ.
ಸಮಾರಂಭ ನಡೆಯುವ ಸ್ಥಳ : ದೆಹಲಿ ಕರ್ನಾಟಕ ಸಂಘ, ಸೆಕ್ಟರ್-12, ಆರ್.ಕೆ.ಪುರಂ, ನವದೆಹಲಿ - 110 022.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications