ಮಾಜಿ ಸಿಎಂಗಳ ಅಕ್ರಮ ಮೊತ್ತ 299,42,72,022 ರೂ

Dhram Singh, SM Krishna and HD Kumaraswamy
ಬೆಂಗಳೂರು, ಜ.21: ಮಾಜಿ ಸಿಎಂಗಳಾದ ಎಸ್.ಎಂ.ಕೃಷ್ಣ, ಎಚ್.ಡಿ.ಕುಮಾರ ಸ್ವಾಮಿ ಹಾಗೂ ಧರಂ ಸಿಂಗ್ ಅವರುಗಳು ತಮ್ಮ ಆಡಳಿತಾವಧಿಯಲ್ಲಿ ನಿಯಮ ಮೀರಿ ಗಣಿಗಾರಿಕೆಗೆ ಪರವಾನಿಗೆ ನೀಡಿದ ಪರಿಣಾಮ ರಾಜ್ಯದ ಬೊಕ್ಕಸಕ್ಕೆ ಆಗಿರುವ ಅಂದಾಜು ನಷ್ಟ 299,42,72,022 ರೂ ಎಂದು ಸಾಮಾಜಿಕ ಕಾರ್ಯಕರ್ತ ಅಬ್ರಹಾಂ ಟಿ.ಜೋಸೆಫ್ ಆರೋಪಿಸಿದ್ದಾರೆ.

ಗಣಿ ಮತ್ತು ಭೂ ವಿಜ್ಞಾನ, ಕರ್ನಾಟಕ ಅರಣ್ಯ ಹಾಗೂ ಅರಣ್ಯ ಸಂರಕ್ಷಣಾ ಕಾಯ್ದೆ ನಿಯಮಗಳನ್ನು ಉಲ್ಲಂಘಿಸಿ, ಸುಮಾರು 7000 ಹೆಕ್ಟೇರ್ ಮೀಸಲು ಅರಣ್ಯ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆಗೆ ಪರವಾನಗಿ ನೀಡಲಾಗಿದೆ.

ಕೋರ್ಟ್ ವಿವರಣೆ : ಕಾರ್ಯಕರ್ತ ಅಬ್ರಹಾಂ ಟಿ.ಜೋಸೆಫ್ ಲೋಕಾಯುಕ್ತ ಕೋರ್ಟ್‌ನಲ್ಲಿ ನ.30ರಂದು ಖಾಸಗಿ ದೂರು ದಾಖಲಿಸಿದ್ದರು.ದೂರನ್ನು ಅಂಗೀಕರಿಸಿದ್ದ ಲೋಕಾಯುಕ್ತ ಕೋರ್ಟ್ ಡಿ.3ರಂದು ತನಿಖೆಗೆ ಆದೇಶಿದ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸ್ ಎಸ್ಪಿ ಜಗದೀಶ್ ಅವರು ತ್ರಿಮೂರ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು.ನಂತರ ಮೂವರು ಈ ಆದೇಶ ರದ್ದುಗೊಳಿಸುವಂತೆ ಹೈಕೋರ್ಟ್ ಮೆಟ್ಟಿಲೇರಿದ್ದರು.

ಆದರೆ, ತನಿಖೆ ಮುಂದುವರೆಸಲು ಹೈಕೋರ್ಟ್ ಆದೇಶ ನೀಡಿರುವುದು ಮೂವರಿಗೂ ಹಿನ್ನೆಡೆಯಾಗಿದೆ. ಹೈಕೋರ್ಟ್ ತೀರ್ಪನ್ನು ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಲು ಎಚ್.ಡಿ.ಕುಮಾರ ಸ್ವಾಮಿ ನಿರ್ಧರಿಸಿದ್ದಾರೆ. ಆದೇಶ ತಮಗೆ ಪೂರ್ಣವಾಗಿ ತೃಪ್ತಿ ತಂದಿಲ್ಲ. ಹಾಗಾಗಿ ಸುಪ್ರೀಂಕೋರ್ಟ್ ಮೆಟ್ಟಿಲೇರುವುದಾಗಿ ಅವರ ಪರ ವಕೀಲ ಬಾಷಾ ಹೇಳಿದ್ದಾರೆ. ಅದರೆ, ಧರಂಸಿಂಗ್ ಹಾಗೂ ಎಸ್ಸೆಂ ಕೃಷ್ಣ ಅವರ ಮುಂದಿನ ನಡೆ ಬಗ್ಗೆ ಇನ್ನೂ ಸ್ಪಷ್ಟತೆ ಇಲ್ಲ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+