ಕುಮಾರಸ್ವಾಮಿ ವಿರುದ್ಧ ಸಿಡಿದೆದ್ದ ರಾಜೇಶ್ ಗುಂಡೂರಾವ್
ಬೆಂಗಳೂರು,
ಜ.22: ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಅವರು ಮಾತು ತಪ್ಪಿ ಜೆಡಿಎಸ್ ಯುವ ಘಟಕಕ್ಕೆ ದಿಢೀರನೆ ಮಧು (ಬಂಗಾರಪ್ಪ) ಸಿಂಚನ ಮಾಡಿದ್ದನ್ನು ವಿರೋಧಿಸಿ ಜೆಡಿಎಸ್ ನಗರ ಘಟಕದ ಉಪಾಧ್ಯಕ್ಷ ಸ್ಥಾನಕ್ಕೆ ರಾಜೇಶ್ ಗುಂಡೂರಾವ್ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ. id="toptextpromo">ಇದರೊಂದಿಗೆ
ಯುವ ಜೆಡಿಎಸ್ನಲ್ಲಿ ಭಿನ್ನಮತ ಉಲ್ಬಣಗೊಂಡಂತಾಗಿದೆ. ಜೆಡಿಎಸ್ ಯುವ ಘಟಕದ ಅಧ್ಯಕ್ಷ ಸ್ಥಾನಕ್ಕೆ ಮಧು ಬಂಗಾರಪ್ಪ ಅವರನ್ನು ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಅವರು ಕಳೆದ ವಾರ ದಿಢೀರನೆ ಆಯ್ಕೆ ಮಾಡುತ್ತಿದ್ದಂತೆ ರಾಜೇಶ್ ಗುಂಡೂರಾವ್ ತಮ್ಮ ಅಸಮಾಧಾನ ಹೊರಹಾಕಿದ್ದರು. ಇದೇ ವೇಳೆ, ತಮ್ಮ ಅಸಮಾಧಾನ ಮಧು ಬಂಗಾರಪ್ಪ ಅವರ ವಿರುದ್ಧ ಅಲ್ಲ; ಆದರೆ ಮಾತುತಪ್ಪಿದ ಎಚ್ ಡಿ ಕುಮಾರಸ್ವಾಮಿ ವಿರುದ್ಧ ಎಂದು ಅವರು ಸ್ಪಷ್ಟಪಡಿಸಿದ್ದಾರೆ. id='are-slot-1' class='oiad oi-axt oiadv'> id='top-searched-articles'>ಈ
ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ರಾಜೇಶ್ ಗುಂಡೂರಾವ್, ಜೆಡಿಎಸ್ ಯುವ ಘಟಕದ ಅಧ್ಯಕ್ಷ ಸ್ಥಾನಕ್ಕೆ ತನ್ನನ್ನು ನೇಮಕ ಮಾಡುವುದಾಗಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದರು. ಆದರೆ, ಅವರೀಗ ಮಾತು ತಪ್ಪಿದ್ದು, ಆ ಸ್ಥಾನಕ್ಕೆ ಮಧು ಬಂಗಾರಪ್ಪರನ್ನು ನೇಮಕಗೊಳಿಸಿದ್ದಾರೆ. ಇದರಿಂದ ಅಸಮಾಧಾನಗೊಂಡಿರುವ ತಾನು ನಾಳೆ ಅಥವಾ ನಾಡಿದ್ದು ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಿ ಜೆಡಿಎಸ್ನಿಂದ ಹೊರನಡೆಯುವುದಾಗಿ ತಿಳಿಸಿದರು.











Click it and Unblock the Notifications