ಜ. 30ಕ್ಕೆ ಯಡಿಯೂರಪ್ಪ ಮತ್ತೆ ಜೈಲುಪಾಲು?
ಹೀಗಿರುವಾಗ, ಆರೋಪಗಳು ಮೇಲ್ನೋಟಕ್ಕೆ ಸಾಬೀತಾಗಿರುವುದರಿಂದ ವಿಚಾರಣೆಗೆ ಸಮನ್ಸ್ ಜಾರಿಗೊಳಿಸಬೇಕು' ಎಂದು ಬಾಷಾ ಪರ ವಕೀಲ ನಿತಿನ್ ಲೋಕಾಯುಕ್ತ ಕೋರ್ಟಿನಲ್ಲಿ ವಾದ ಮಂಡಿಸಿದ್ದಾರೆ.
ವಕೀಲ ಸಿರಾಜಿನ್ ಬಾಷಾ ಅವರು ರಾಚೇನಹಳ್ಳಿಯಲ್ಲಿ ಅಕ್ರಮ ಡಿನೋಟಿಫಿಕೇಷನ್ ಬಗ್ಗೆ ನೀಡಿರುವ ಈ ದೂರಿನಲ್ಲಿ ಆರೋಪಿಗಳಿಗೆ ಸಮನ್ಸ್ ಜಾರಿಗೊಳಿಸುವ ಬಗ್ಗೆ ಲೋಕಾಯುಕ್ತ ಕೋರ್ಟ್ ಜ.30ಕ್ಕೆ ಆದೇಶ ನೀಡಲಿದೆ.
ಒಂದುವೇಳೆ, ಕೋರ್ಟ್ ಸಮನ್ಸ್ ಜಾರಿಗೊಳಿಸಿದರೆ, ಯಡಿಯೂರಪ್ಪ ಮತ್ತೆ ನ್ಯಾಯಾಲಯದ ಕಟಕಟೆಗೆ ಹಾಜರಾಗಬೇಕಾಗುತ್ತದೆ. ರಾಚೇನಹಳ್ಳಿಯಲ್ಲಿ ಯಡಿಯೂರಪ್ಪ ಮತ್ತು ಪುತ್ರರು, ಬಿಡಿಎ ಸ್ವಾಧೀನಪಡಿಸಿಕೊಂಡಿದ್ದ ಜಮೀನನ್ನು ಡಿನೋಟಿಫೈ ಮಾಡಿರುವ ಆರೋಪ ಎದುರಿಸುತ್ತಿದ್ದಾರೆ.
ಈ ಪ್ರಕರಣದ ವಿಚಾರಣೆ ಕಳೆದ ಶನಿವಾರ ನಡೆಯಿತು. ಆ ಸಂದರ್ಭದಲ್ಲಿ ಲೋಕಾಯುಕ್ತ ಪೊಲೀಸರು ವರದಿಯಲ್ಲಿ ಸಲ್ಲಿಸಿರುವ ದಾಖಲೆಗಳಲ್ಲೇ ಆರೋಪಿಗಳ ವಿರುದ್ಧ ಬಲವಾದ ಸಾಕ್ಷ್ಯಾಧಾರಗಳಿವೆ ಎಂದು ನಿತಿನ್ ವಾದಿಸಿದರು. ಆದರೆ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ (ಲೋಕಾಯುಕ್ತ) ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಎನ್ ಕೆ ಸುಧೀಂದ್ರ ರಾವ್ ಅವರು ಆರೋಪಿಗಳಿಗೆ ಸಮನ್ಸ್ ಜಾರಿ ಮಾಡಬೇಕೇ, ಇಲ್ಲವೇ ಎಂಬುದರ ಬಗ್ಗೆ 30ರಂದು ಆದೇಶ ಪ್ರಕಟಿಸುವುದಾಗಿ ಹೇಳಿದರು.