ಜೆಡಿಎಸ್ಸಿಗೆ ಮಧು ಸೇರ್ಪಡೆ, ಗೌಡ್ರ ತಂತ್ರಗಾರಿಕೆ

ಹಳಿಯಾಳದಲ್ಲಿ ಜನವರಿ 28 ರಂದು ನಡೆಯಲಿರುವ ಸಮಾವೇಶದಲ್ಲಿ ಮಧು ಬಂಗಾರಪ್ಪ ಅವರಿಗೆ ಅಧಿಕಾರ ಹಸ್ತಾಂತರವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಘೋಷಿಸಿದ ಮೇಲೆ ಪರ ವಿರೋಧ ಹೇಳಿಕೆಗಳು ಬಂದು ಈಗ ತಣ್ಣಗಾಗಿದೆ.
ಗೌಡರ ತಂತ್ರವಾದರೂ ಏನು?: ಬಿಜೆಪಿ ಪ್ರಾಬಲ್ಯವಿರುವ ಮಲೆನಾಡು-ಕರವಾಳಿ ಜಿಲ್ಲೆಗಳಲ್ಲಿ ಜೆಡಿಎಸ್ ಅಧಿಪತ್ಯ ಸ್ಥಾಪಿಸಲು ಕಸರತ್ತು ಆರಂಭವಾಗಿದೆ. ದಿವಂಗತ ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪರ ಅವರ ಜನಪ್ರಿಯತೆಯ ಲಾಭ ಪಡೆದು ಬಿಜೆಪಿಯನ್ನು ಮಣ್ಣು ಮುಕ್ಕಿಸಲು ಜೆಡಿಎಸ್ ಯೋಜಿಸಿದೆ.
ಶಿವಮೊಗ್ಗ, ಉತ್ತರ ಕನ್ನಡ, ಉಡುಪಿ, ಮಂಗಳೂರು, ಚಿಕ್ಕಮಗಳೂರು ಭಾಗದಲ್ಲಿ ಹಳೆತಲೆಗಳಿಗೆ, ಯುವ ನಾಯಕರಿಗೆ ಈಗಲೂ ಬಂಗಾರಪ್ಪ ಅವರೇ ಆದರ್ಶಪ್ರಾಯ ಎಂಬುದರಲ್ಲಿ ಎರಡು ಮಾತಿಲ್ಲ.
ಮಲೆನಾಡು-ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚಿಗೆ ಇರುವ ಈಡಿಗ ಸಮುದಾಯ, ಅಲ್ಪಸಂಖ್ಯಾತರ ಬೆಂಬಲ ಸಿಕ್ಕರೆ ಜೆಡಿಎಸ್ ವೋಟ್ ಬ್ಯಾಂಕ್ ಲೆಕ್ಕಾಚಾರ ಸರಿಯಾಗುತ್ತದೆ. ದೇವೇಗೌಡರ ಈ ನಡೆ ಬಿಜೆಪಿಗೆ ಮಾತ್ರವಲ್ಲ, ಕಾಂಗ್ರೆಸ್ಸಿಗೂ ನುಂಗಲಾರದ ತುತ್ತಾಗಿ ಪರಿಣಮಿಸಲಿದೆ.
ಬಂಗಾರಪ್ಪ ನಿಧನದ ಅನುಕಂಪದ ಅಲೆಯನ್ನು ಮತಗಳಾಗಿ ಪರಿವರ್ತನೆಗೊಂಡರೆ, ಜೆಡಿಎಸ್ ಯೋಜನೆ ಫಲಿಸಿದ್ದಂತಾಗುತ್ತದೆ. ಹಳೇ ಮೈಸೂರು ಪ್ರಾಂತ್ಯದಲ್ಲಿ ಭದ್ರವಾಗಿರುವ ಜೆಡಿಎಸ್, ಬಳ್ಳಾರಿಯಲ್ಲಿ ಹೊಂದಾಣಿಕೆ ರಾಜಕೀಯದಲ್ಲಿ ಯಶ ಕಂಡಿದೆ. ಈಗ ಮಲೆನಾಡು- ಕರಾವಳಿ ಪ್ರದೇಶಗಳತ್ತ ಹರಿಸಿದೆ. ಏನಾಗುವುದೋ ಕಾದು ನೋಡೋಣ...
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications