ಗಾಂಧಿಬಜಾರು ಅಂಗಡಿ ಧ್ವಂಸ, ಬಿಬಿಎಂಪಿ ಬೈಬೇಡಿ

ಗಾಂಧಿಬಜಾರು ಫುಟ್ ಪಾತ್ ತೆರವು ಕಾರ್ಯ ಕಳೆದ ಎರಡ ವರ್ಷದಿಂದ ನಡೆದಿದೆ. ಜುಲೈ 10, 2010ರ ವೇಳೆಗೆ ಅಂಗಡಿಗಳ ತೆರವು ಕಾರ್ಯಕ್ಕೆ ಮುಂದಾಗಿದ್ದ ಪಾಲಿಕೆ ಅಧಿಕಾರಿಗಳಿಗೆ ಪ್ರತಿಭಟನೆಯ ಸ್ವಾಗತ ಸಿಕ್ಕಿತ್ತು.
ಕಳೆದ 30-40 ವರ್ಷಗಳಿಂದ ವ್ಯಾಪಾರ ಮಾಡಿಕೊಂಡು ಬಂದಿರುವ ಹೂವು, ಹಣ್ಣು, ತರಕಾರಿ ವ್ಯಾಪಾರಿಗಳ ತೀವ್ರ ಪ್ರತಿಭಟನೆಗೆ ಹೆದರಿ ಪಾಲಿಕೆ ಅಧಿಕಾರಿಗಳು ಲಾರಿ ತಿರುಗಿಸಿಕೊಂಡು ಹೋಗಿದ್ದರು. ಆದರೆ, ಸುಮಾರು 25ಕ್ಕೂ ವಾರ್ಡ್ ಗಳಲ್ಲಿ ಅಂಗಡಿ ತೆರವು ಕಾರ್ಯ ನಿರಾಂತಕವಾಗಿ ನಡೆದಿತ್ತು.
ಶೇಷಾದ್ರಿಪುರ 1ನೇ ಮುಖ್ಯರಸ್ತೆ, ಜಕ್ಕೂರು, ರಾಜಾಜಿನಗರ 19ನೇ ಮುಖ್ಯರಸ್ತೆ,ಯಲಹಂಕ, ದೊಡ್ಡ ಬೊಮ್ಮಸಂದ್ರ ಸೇರಿದಂತೆ ನಗರದ ವಿವಿಧೆಡೆ ಅಂಗಡಿ ತೆರವು ಕಾರ್ಯ ಬಹುತೇಕ ಪೂರ್ಣಗೊಂಡಿದೆ.
ಮೈಸೂರು, ಉಡುಪಿ ಸೇರಿದಂತೆ ರಾಜ್ಯದ ವಿವಿಧೆಡೆ ಅಕ್ರಮ ಕಟ್ಟಡ, ಅಂಗಡಿ, ದೇಗುಲಗಳನ್ನು ನೆಲಸಮಗೊಳಿಸುವಂತೆ ಸುಪ್ರೀಂಕೋರ್ಟ್ ಆದೇಶ ಕೊಟ್ಟಿರುವುದು ಬಿಬಿಎಂಪಿಗೆ ಭೀಮಬಲ ಬಂದ್ದಂತ್ತಾಗಿದೆ, ಎರಡು ವರ್ಷಗಳಿಂದ ಬಿಬಿಎಂಪಿ ಅಧಿಕಾರಿಗಳು ಅಂಗಡಿಗಳನ್ನು ತೆರವುಗೊಳಿಸಿ ಬೇರೆಡೆ ಹೋಗುವಂತೆ ವ್ಯಾಪಾರಿಗಳಿಗೆ ಮನವಿ ಮಾಡುತ್ತಲೇ ಬಂದಿದ್ದಾರೆ.
ಆದರೆ, ವ್ಯಾಪಾರ ದೃಷ್ಟಿಯಿಂದ ಹಾಗೂ ಅದಕ್ಕಿಂತಲೂ ಹೆಚ್ಚಾಗಿ ಭಾವನಾತ್ಮಕವಾಗಿ ಗಾಂಧಿಬಜಾರನ್ನು ಅಪ್ಪಿಕೊಂಡಿರುವ ವ್ಯಾಪಾರಿಗಳ ಕಿವಿಗೆ ಬಿಬಿಎಂಪಿ ಕೂಗು ಕೇಳಿಸಿರಲಿಲ್ಲ. ಇದರ ಪರಿಣಾಮ ಈ ಧ್ವಂಸ ಕಾರ್ಯ.
ಇಷ್ಟೆಲ್ಲ ಅನರ್ಥಕ್ಕೆ ಯಡಿಯೂರಪ್ಪನೇ ಕಾರಣ...
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications