ಇಷ್ಟೆಲ್ಲ ಅನರ್ಥಕ್ಕೆ ಯಡಿಯೂರಪ್ಪನೇ ಕಾರಣ...

ವಿದ್ಯಾರ್ಥಿ ಭವನ್ ಹಾಲ್ ಆಫ್ ಫೇಮ್ಗೆ ಯಡ್ಡಿ ಸೇರಿದ ಮೇಲೆ... ಹಾಗೆ ಹೂ, ಹಣ್ಣು ತರಕಾರಿ ಮಾರಾಟಗಾರ ಜೊತೆ ಎರಡು ನಿಮಿಷ ಮಾತನಾಡಿದ ಅಂದಿನ ಸಿಎಂ ಎಲ್ಲರಿಗೂ ಪುನರ್ವಸತಿ ಕಲ್ಪಿಸುವ ಭರವಸೆ ನೀಡಿದ್ದರು.
"ಅಣ್ಣಂದಿರೇ, ಅಕ್ಕ ತಂಗಿಯರೇ ನಿಮ್ಮ ನೋವು ನನಗೆ ಅರ್ಥ ಆಗುತ್ತದೆ. ನಿಮಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವವರೆಗೂ ಇಲ್ಲಿಂದ ನಿಮ್ಮ ಅಂಗಡಿಗಳನ್ನು ತೆರವುಗೊಳಿಸುವುದಿಲ್ಲ" ಎಂದು ಯಡಿಯೂರಪ್ಪ ಅವರು ನೀಡಿದ್ದ ಭರವಸೆ ಹುಸಿಯಾಗಿದೆ.
ಅನಾಥ ರಕ್ಷಕ ಯಡ್ಡಿ: ಬಿಬಿಎಂಪಿ ಅಧಿಕಾರಿಗಳು ಏಕಾಏಕಿ ನಮ್ಮ ಬದುಕನ್ನು ಕಿತ್ತುಕೊಳ್ಳಲು ಬಂದಿದ್ದಾರೆ ನಮ್ಮನ್ನು ಕಾಪಾಡಿ ಎಂದು ಮಹಿಳೆಯೊಬ್ಬರು ಯಡಿಯೂರಪ್ಪ ಅವರ ಕಾಲಿಗೆರಗಿದ್ದರು. ಇದನ್ನು ಕಂಡು ವಿದ್ಯಾರ್ಥಿ ಭವನ್ ದೋಸೆ ಮೇಲಿನ ಬೆಣ್ಣೆಯಂತೆ ಕರಗಿದ ಶ್ರೀಮಾನ್ ಯಡಿಯೂರಪ್ಪ ಅವರು ಆಶ್ವಾಸನೆ ನೀಡಿದ್ದರು.
ಆದರೆ, ಆಶ್ವಾಸನೆ, ಆದೇಶವಾಗಲಿಲ್ಲ. ಯಡಿಯೂರಪ್ಪ ಸರ್ಕಾರ ಉಳಿಯಲಿಲ್ಲ. ಸುಪ್ರೀಂಕೋರ್ಟ್ ಆದೇಶ, ಸರ್ಕಾರದ ನಿರ್ದೇಶನದ ಮೇರೆಗೆ ಬಿಬಿಎಂಪಿ ತನ್ನ ಕಾರ್ಯ ತಾನು ಮುಂದುವರೆಸಿದೆ.
ಯಡಿಯೂರಪ್ಪ ಅವರ ಭರವಸೆ ನೆಚ್ಚಿಕೊಂಡ ಇಲ್ಲಿನ ವ್ಯಾಪಾರಸ್ಥ ಮತ್ತೆ ಸರ್ಕಾರದ ಕದ ತಟ್ಟಲೇ ಇಲ್ಲ. ಬಿಬಿಎಂಪಿ ನೋಟಿಸ್ ಗೆ ಬೆದರದೆ, ನಿತ್ಯ ಖಾಕಿ ಪಡೆಗೆ ಮಾಮೂಲಿ ನೀಡುತ್ತಾ ಕಾಲದೂಡುತ್ತಿದ್ದದ್ದು ಈಗ ಬುಡಕ್ಕೆ ಬಂದಿದೆ.
ಯಡಿಯೂರಪ್ಪ ಅವರಂತೆ ಸ್ಥಳೀಯ ಕಾರ್ಪೋರೇಟರ್, ಮಾಜಿ ಸದಸ್ಯರುಗಳಾದ ಚಂದ್ರಶೇಖರ್, ರವಿ ಸುಬ್ರಮಣ್ಯ ಆ ಕಡೆಯಿಂದ ಕಟ್ಟೆ ಸತ್ಯನಾರಾಯಣ ಅವರುಗಳು ಕೂಡಾ ಶಾಶ್ವತ ಪರಿಹಾರ ಒದಗಿಸುವ ಯಾವ ಮಾತನ್ನು ಆಡದಿರುವುದು ವ್ಯಾಪಾರಸ್ಥರ ಕುತ್ತಿಗೆ ಬಂದಿದೆ ಅಷ್ಟೇ.
ರಾಜಕಾರಣಿಗಳ ಭರವಸೆಗಳು ನೀರ ಮೇಲಿನ ಗುಳ್ಳೆಯಂತೆ ಎಂಬ ನಿಜ ಎಲ್ಲರಿಗೂ ಗೊತ್ತಿದೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications