ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬೀದರ್ ಕಲ್ಬುರ್ಗಿ ರಾಯಚೂರು ಕೊಪ್ಪಳ ಯಾದಗಿರಿ ಬಂದ್

By * ಸಾಗರ ದೇಸಾಯಿ, ಯಾದಗಿರಿ
|
Google Oneindia Kannada News

Hyderabad Karnataka bandh on January 24
ಯಾದಗಿರಿ, ಜ. 24 : ಹೈದ್ರಾಬಾದ ಕರ್ನಾಟಕ ಪ್ರದೇಶದ ಸರ್ವಾಂಗೀಣ ಪ್ರಗತಿಗಾಗಿ ಸಂವಿಧಾನದ 371ನೇ ಕಲಂಗೆ ತಿದ್ದುಪಡಿ ತರುವಂತೆ ಆಗ್ರಹಿಸಿ ಹೈದ್ರಾಬಾದ್ ಕರ್ನಾಟಕ ಪ್ರದೇಶದ ಹೋರಾಟಗಳ ಸಮನ್ವಯ ಸಮಿತಿ ಜ.24ರಂದು ಹೈದ್ರಾಬಾದ್ ಕರ್ನಾಟಕ ಬಂದ್‌ಗೆ ಕರೆ ನೀಡಿದೆ.

ಹೈದ್ರಾಬಾದ್ ಕರ್ನಾಟಕ ಹೋರಾಟ ಸಮಿತಿ, ಹೈದ್ರಾಬಾದ್ ಕರ್ನಾಟಕ ಕೈಗಾರಿಕಾ ಮತ್ತು ವಾಣಿಜ್ಯ ಸಂಸ್ಥೆ, ವಿವಿಧ ಜನಪರ, ಕನ್ನಡಪರ, ದಲಿತ, ಹಿಂದುಳಿದ, ಅಲ್ಪಸಂಖ್ಯಾತ, ರೈತ, ಕಾರ್ಮಿಕ, ವಿದ್ಯಾರ್ಥಿ, ಯುವಕರ ಪರ ಸಂಘಟನೆಗಳು ಬಂದ್‌ಗೆ ಬೆಂಬಲ ಸೂಚಿಸಿವೆ.

ಬರುವ ಚಳಿಗಾಲದ ಬಜೆಟ್ ಅಧಿವೇಶನದಲ್ಲಿ 371ನೇ ಅನುಚ್ಛೇದದ ತಿದ್ದುಪಡಿಯಾಗಬೇಕು ಎಂದು ಹೈ.ಕ.ಪ್ರದೇಶದ ಹೋರಾಟಗಳ ಸಮನ್ವಯ ಸಮಿತಿ ಆಗ್ರಹಿಸಿದೆ. ಬೀದರ್, ಕಲ್ಬುರ್ಗಿ, ರಾಯಚೂರು, ಕೊಪ್ಪಳ ಮತ್ತು ಯಾದಗಿರಿ ಜಿಲ್ಲಾ ಮತ್ತು ತಾಲೂಕು ಕೇಂದ್ರ ಹಾಗೂ ನಗರ ಕೇಂದ್ರಗಳಲ್ಲಿ ಬಂದ್ ಆಚರಿಸಲಾಗುತ್ತಿದೆ.

ಬಂದ್‌ಗೆ ಸಹಕರಿಸುವಂತೆ ಹೈ.ಕ.ಹೋರಾಟ ಸಮಿತಿ ಅಧ್ಯಕ್ಷ ವೈಜನಾಥ ಪಾಟೀಲ್ ಹಾಗೂ ವಿವಿಧ ಸಂಘಟನೆಗಳ ಪ್ರತಿನಿಧಿಗಳು ಮನವಿಮಾಡಿಕೊಂಡಿದ್ದಾರೆ. 371ನೇ ಕಲಂ ತಿದ್ದುಪಡಿಗೆ ನನ್ನ ಬೆಂಬಲ ಇದೆ ಎಂದು ಸಣ್ಣ ಕೈಗಾರಿಕೆ ಸಚಿವ ರಾಜೂಗೌಡ ಸೋಮವಾರ ಯಾದಗಿರಿ ನಗರದ ಪ್ರವಾಸಿ ಮಂದಿರದಲ್ಲಿ ಹೇಳಿದರು.

English summary
Hyderabad Karnataka bandh is observed on January 24 to pressurize the central govt to amend article 371 of Constitution of India for the development of the region, which has been neglected so far. Bandh is being observed in Bidar, Gulbarga, Raichur, Koppal, Yadgir districts.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X