ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನಾನೇ ಕಿಂಗ್ ಮೇಕರ್, ಸರ್ಕಾರ ಬೀಳಿಸಬಲ್ಲೆ : ಎಚ್ಡಿಕೆ

By Mahesh
|
Google Oneindia Kannada News

HD Kumaraswamy
ಕುಮಟಾ, ಜ.25: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಂತೆ ರಾಜ್ಯ ಪ್ರವಾಸನಿರತ(ಅಧಿಕೃತ ಪ್ರವಾಸ ಫೆ.10ರಿಂದ)ರಾಗಿರುವ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರು ಭರ್ಜರಿ ಡೈಲಾಗ್ ಹೊಡೆದಿದ್ದಾರೆ. ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರುವುದಕ್ಕೆ ನಾನು ಹಾಗೂ ಬಂಗಾರಪ್ಪ ಕಾರಣ. ಈಗ ಸರ್ಕಾರ ಪತನಕ್ಕೂ ನಾನೇ ಕಾರಣನಾಗಬಲ್ಲೆ ಎಂದಿದ್ದಾರೆ.

ಕುಮಟಾದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕುಮಾರಸ್ವಾಮಿ, ರಾಜ್ಯದ 224 ಕ್ಷೇತ್ರಗಳಲ್ಲಿಯೂ ಜೆಡಿಎಸ್ ಪಕ್ಷ ಸ್ವತಂತ್ರವಾಗಿ ಸ್ಪರ್ಧಿಸಲಿದೆ ಎಂದರು. ಸರ್ಕಾರ ಬೀಳುಸುವ ಕೆಲಸಕ್ಕೆ ಕೈ ಹಾಕಿಲ್ಲವಾದರೂ, ಪರಿಸ್ಥಿತಿ ಹೀಗೆ ಮುಂದುವರೆದರೆ ಜನರ ಹಿತದೃಷ್ಟಿಯಿಂದ ಸರ್ಕಾರ ಕೆಳಗಿಳಿಸಬೇಕಾದ್ದು ಅನಿವಾರ್ಯವಾಗಿದೆ ಎಂದರು.

ರಾಜ್ಯದಲ್ಲಿ ಆಡಳಿತರೂಢ ಬಿಜೆಪಿ ಸರ್ಕಾರವು ಉತ್ತಮ ಆಡಳಿತ ನೀಡಲು ಸಂಪೂರ್ಣ ವಿಫಲವಾಗಿದೆ. ಬಿಜೆಪಿ ನಾಯಕರು ಅಧಿಕಾರದ ವ್ಯಾಮೋಹದಿಂದ ದಿನ ದೂಡುತ್ತಿದೆ. ಜನಹಿತ ಕಾಯುವುದರಲ್ಲಿ ಇವರಿಗೆ ಆಸಕ್ತಿಯಿಲ್ಲ.

ಯಡಿಯೂರಪ್ಪ ಸಾಧನೆ : ಮುರೂವರೆ ವರ್ಷ ನಾನು ಸರ್ಕಾರ ನಡೆಸಿಲ್ಲ. ಸರ್ಕಸ್ ನಡೆಸಿದ್ದೇನೆ ಎಂದು ಯಡಿಯೂರಪ್ಪ ಅವರೇ ಒಪ್ಪಿಕೊಂಡಿದ್ದಾರೆ. ಎಲ್ಲೆಡೆ ನಾನೇ ಮುಖ್ಯಮಂತ್ರಿ ಎಂದು ಹೇಳಿಕೊಂಡು ತಿರುಗುತ್ತಿದ್ದಾರೆ.

ಕೃಷಿ ಬಜೆಟ್ ಸರಿಯಾದ ಫಲ ನೀಡಿಲ್ಲ. ಕೃಷಿ ಬಜೆಟ್ ಮಂಡಿಸಿದ ನಂತರ ರಾಜ್ಯದಲ್ಲಿ ಅತಿ ಹೆಚ್ಚಿನ ರೈತರು ಪ್ರಾಣ ಕಳೆದುಕೊಂಡಿದ್ದಾರೆ. ರೈತರ ಆತ್ಮಹತ್ಯೆಯೇ ಯಡಿಯೂರಪ್ಪ ಅವರ ಸಾಧನೆ ಎಂದು ಕುಮಾರಸ್ವಾಮಿ ಟೀಕಿಸಿದರು.

English summary
JDS State president HD Kumaraswamy says he is the BJP Remote control and kingmaker. He can form government or demolish Karnataka Government. Kumaraswamy along with JDS activists are on Karnataka tour. Official JDS tour is scheduled from Feb.10.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X