ಪಂಕ್ತಿಭೇದ ಭೋಜನ: ಉಡುಪಿ ರಥಬೀದಿಗೆ ಮುತ್ತಿಗೆ

ಗುರುವಾರ ( ಜ 26) ಮಧ್ಯಾಹ್ನ ಎರಡು ಗಂಟೆಗೆ ಸಿಪಿಐ (ಎಂ) ಮುಖಂಡ ಮತ್ತು ಮಾಜಿ ಶಾಸಕ ಶ್ರೀರಾಮ ರೆಡ್ಡಿ ನೇತ್ರತ್ವದಲ್ಲಿ ಉಡುಪಿ ಅಜ್ಜರಕಾಡು ಗಾಂಧೀ ಮೈದಾನದಿಂದ ಸಾವಿರಾರು ಸಂಖ್ಯೆಯಲ್ಲಿ ಕವಿಮುದ್ದಣ್ಣ ಮಾರ್ಗದ ಮೂಲಕ ತೆರಳಿದ ಕಾರ್ಯಕರ್ತರು ಸಂಸ್ಕೃತ ವಿದ್ಯಾಲಯದ ಮೂಲಕ ರಥಬೀದಿ ಆವರಣ ಪ್ರವೇಶಿಸಲು ಮುಂದಾದಾಗ ಪೋಲೀಸರು ಅವರಿಗೆ ತಡೆಯೊಡ್ಡಿದರು. ಆದರೆ ಸಿಪಿಐ ಕಾರ್ಯಕರ್ತರು ಬ್ಯಾರಿಕೇಡ್ ಭೇದಿಸಿ ಮುನ್ನಗಲು ಮುಂದಾದಾಗ ಪೋಲೀಸರು ಪ್ರತಿಭಟನಾಕಾರರನ್ನು ತಡೆಯುವಲ್ಲಿ ಯಶಸ್ವಿಯಾದರು.
ಆದರೆ ರಸ್ತೆ ಮಧ್ಯದಲ್ಲೇ ಪ್ರತಿಭಟನೆಗೆ ಕೂತ ಸಿಪಿಐ ಕಾರ್ಯಕರ್ತರು ಇನ್ನು ಮುಂದೆ ಶ್ರೀಕೃಷ್ಣ ಮಠದಲ್ಲಿ ಪಂಕ್ತಿಭೇದ ಮಾಡುವುದಿಲ್ಲ ಎಂದು ಅಷ್ಟ ಮಠಗಳು ಆಶ್ವಾಸನೆ ನೀಡಿದರೆ ಮಾತ್ರ ಧರಣಿ ನಿಲ್ಲಿಸುವುದಾಗಿ ಪಟ್ಟು ಹಿಡಿದರು. ಆದರೆ ಪರ್ಯಾಯ ಸೋದೆ ಮಠದಿಂದ ಯಾವುದೇ ಪ್ರತಿಕ್ರಿಯೆ ಬರದೇ ಇದ್ದ ಕಾರಣ ಪೋಲೀಸರು ಅವರ ಜೊತೆಗೆ ಮಾತುಕತೆಗೆ ಮುಂದಾದರು. ಪೋಲೀಸರ ಮನವಿಗೆ ಪ್ರತಿಭಟನಾಕಾರರು ಸೊಪ್ಪು ಹಾಕದೆ ಇದ್ದಾಗ ಅವರನ್ನೆಲ್ಲಾ ಭಂದಿಸಲಾಯಿತು.
ಕೊಪ್ಪಳ, ಶಿವಮೊಗ್ಗ, ಬಳ್ಳಾರಿ, ರಾಯಚೂರು, ಗುಲ್ಬರ್ಗ ಮುಂತಾದ ಭಾಗಗಳಿಂದ ಸಾವಿರಾರು ಸಂಖ್ಯೆಯಲ್ಲಿ ಸಿಪಿಐ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications