ಅವೆನ್ಯೂರಸ್ತೆ: ದೇವರೇ,ಇದು ಸುಳ್ಳು ಸುದ್ದಿಯಾಗಲಿ!

ಆದರೆ ಪೊಲೀಸರಿಗೆ ಇದನ್ನೆಲ್ಲ ಸಹಿಸಲಾಗಿಲ್ಲ. ಯಾರೇ ಆಗಲಿ ಇನ್ಮುಂದೆ ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆಗಿಳಿದರೆ ಟ್ರಾಫಿಕ್ ಜಾಮ್ ಕಾಡಬಾರದು. ಜನ ನರಕ ಅನುಭವಿಸಬಾರದು ಎಂಬ ಸದುದ್ದೇಶದೊಂದಿಗೆ ಪೊಲೀಸರು ಈ ಭಾಗವನ್ನು ಅಕ್ಷರಶಃ ನರಕವನ್ನಾಗಿ ಪರಿವರ್ತಿಸಲು ನಿರ್ಧರಿಸಿಯಾಗಿದೆ!
ಏನಪಾ ಅಂದರೆ ಹೋಗಿ ಹೋಗಿ ಅವೆನ್ಯೂ ರೋಡಿನಲ್ಲಿ ಬಿಎಂಟಿಸಿ ಬಸ್ಸುಗಳನ್ನು ಓಡಾಡುವುದಕ್ಕೆ ಅನುಮತಿ ನೀಡಿದ್ದಾರೆ ಬೆಂಗಳೂರು ಟ್ರಾಫಿಕ್ ಪೊಲೀಸರು. 10 ದಿನಗಳ ಹಿಂದೆ ವಕೀಲರು ಮೈಸೂರು ಬ್ಯಾಂಕ್ ವೃತ್ತವನ್ನು ಹೈಜಾಕ್ ಮಾಡಿದಾಗ ಅನಿವಾರ್ಯವಾಗಿ ಬಿಎಂಟಿಸಿ ಬಸ್ಸುಗಳು ಕೆಆರ್ ಮಾರುಕಟ್ಟೆಯಿಂದ ಅವೆನ್ಯೂ ರೋಡ್ ಮೂಲಕ ಮೆಜೆಸ್ಟಿಕ್ ತಲುಪಿಕೊಂಡಿವೆ.
ಆ ಸಂದರ್ಭದಲ್ಲಿ ಯಾವ ಪುಣ್ಯಾತ್ಮನಿಗೆ ಈ ಐಡಿಯಾ ಬಂತೋ, ಹೌದಲ್ವಾ ಇದನ್ನು ಹೀಗೇ ಮುಂದುವರಿಸಿದರೆ ಹೇಗೆ? ಎಂದು ಆಲೋಚಿಸಿ, ಇದೀಗ 2 ದಿನಗಳಿಂದ ಬಿಎಂಟಿಸಿ ಬಸ್ಸುಗಳು ೀ ರಸ್ತೆಯಲ್ಲಿ ಪ್ರಾಯೋಗಿಕವಾಗಿ ಓಡಾಡಲಾರಂಭಿಸಿವೆ!
ಅನೇಕ ದಶಕಗಳಿಂದ ಈ ರಸ್ತೆಯಲ್ಲಿ ಬಸ್ಸುಗಳು ಓಡಾಡಿದ್ದೇ ಇಲ್ಲ! ಕಾರಣ ಇದೊಂದು ಶುದ್ಧ ವ್ಯಾಪಾರಿ ರಸ್ತೆ. ಇಲ್ಲಿ ಜನ-ದನ ಓಡಾಡೋಕ್ಕೇ ಆಗೊಲ್ಲ. ಅಂಥಾದ್ದರಲ್ಲಿ ಬಸ್ಸುಗಳಲ್ಲಿ ಓಡಾಡುವ ಮಾತು ಎಲ್ಲಿಯದು ಅಂತ ಅತ್ಯಂತ ಔಚಿತ್ಯಪೂರ್ಣವಾಗಿ ಬಸ್ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಆದರೆ ಮುಂದಿನ ವಾರದಿಂದ ಈ ರಸ್ತೆಯಲ್ಲಿ ಮತ್ತೆ ಬಸ್ಸು ಸಂಚರಿಸಲಿದೆ. ಯಾವುದಕ್ಕೇ ಆಗಲಿ ನೀವು ಇನ್ಮುಂದೆ ಅವೆನ್ಯೂ ರಸ್ತೆಯತ್ತ ಹೆಜ್ಜೆ ಹಾಕಬೇಡಿ, ಹುಷಾರು!
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications