ಸಿಂದಗಿ ಮತ್ತೆ ಸುದ್ದಿಗೆ: ವಿದ್ಯಾರ್ಥಿ ಆತ್ಮಹತ್ಯೆ

ಸಿಂದಗಿಯ ಆರ್ ಬಿ ಪಾಟೀಲ್ ಕಾಲೇಜಿನ ಪ್ರಥಮ ವರ್ಷದ ಬಿಎ ವಿದ್ಯಾರ್ಥಿ ಶಿವಪುತ್ರ (18) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಈತ ಇಂದು ಬೆಳಗ್ಗೆ ಕಾಲೇಜು ಆವರಣದಲ್ಲಿ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.
ಈತನ ಮೃತದೇಹದ ಬಳಿ ಡೆತ್ನೋಟ್ ಲಭಿಸಿದ್ದು, ಅದರಲ್ಲಿ ದೇಶದ ಭ್ರಷ್ಟಾಚಾರದ ಬಗ್ಗೆ ಪ್ರಸ್ತಾಪಿಸಿದ್ದಾನೆ. ಹಾಗೂ ಇದರಿಂದ ನೊಂದು ತಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ತಿಳಿಸಿದ್ದಾನೆ ಎನ್ನಲಾಗಿದೆ. ಸಿಂದಗಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.












Click it and Unblock the Notifications