ವಚನ ಸಾಹಿತ್ಯ ಹರಿಕಾರ ಬಸವರಾಜುಗೆ ನಮನ

ವಚನ ಸಾಹಿತ್ಯ, ವೀರಶೈವ ಧರ್ಮದ ಬಗ್ಗೆ ಅಧಿಕಾರಯುತವಾಗಿ, ಆಧಾರಗಳ ಸಮೇತ ವಿವರಿಸಬಲ್ಲ ದಣಿಯದ ಜೀವ ಎಲ್ ಬಿ, ಮನಸ್ಸು ಎಷ್ಟು ಮೃದುವೋ ವಿಷಯ ಪ್ರತಿಪಾದನೆಯಲ್ಲಿ ಅಷ್ಟೇ ಕಠಿಣ. ಕವಿ ಮನಸ್ಸು, ಬಂಡಾಯಗಾರರ ಛಲ ಅವರ ಗುಣವಾಗಿತ್ತು.
ಬಸವರಾಜು ಅವರ ಜನನ, ವಿದ್ಯಾಭ್ಯಾಸ : ಕೋಲಾರ ಜಿಲ್ಲೆಯ ಎಡಗೂರಿನಲ್ಲಿ 1919 ಅಕ್ಟೋಬರ್ 5 ರಂದು ಬಸವರಾಜು ಅವರು ಜನಿಸಿದರು. ಇವರ ತಾಯಿ ವೀರಮ್ಮ, ತಂದೆ ಲಿಂಗಪ್ಪ. ಎಡಗೂರಿನಲ್ಲಿ ಪ್ರಾಥಮಿಕ ಶಿಕ್ಷಣ ಪಡೆದು, ತುಮಕೂರಿನ ಸಿದ್ಧಗಂಗೆಯಲ್ಲಿ ಪ್ರೌಢಶಿಕ್ಷಣ ಮುಗಿಸಿದರು.
ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಬಿಎ ಮತ್ತು ಮೈಸೂರು ವಿವಿಯಲ್ಲಿ ಎಂಎ ಪದವಿ ಗಳಿಸಿದರು. ಮೂರು ದಶಕಗಳಿಗೂ ಹೆಚ್ಚು ಕಾಲ ಮೈಸೂರು ವಿವಿಯ ಕನ್ನಡ ವಿಭಾಗದಲ್ಲಿ ಅಧ್ಯಾಪಕರಾಗಿ ಕಾರ್ಯ ನಿರ್ವಹಿಸಿದರು. ಅಪಾರ ಶಿಷ್ಯವರ್ಗವನ್ನು ಸಂಪಾದಿಸಿದರು.
ಪ್ರಶಸ್ತಿ, ಪುರಸ್ಕಾರ : ಎಲ್ ಬಿ ಅವರಿಗೆ ಅನೇಕ ಪ್ರಶಸ್ತಿ ಗೌರವಗಳು ಸಂದಿವೆ. ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಕನ್ನಡ ರಾಜ್ಯೋತ್ಸವ ಪ್ರಶಸ್ತಿ, ಪ್ರೊ. ಸಂ. ಶಿ. ಭೂಸನೂರ ಮಠ ಪ್ರಶಸ್ತಿ, ಪಂಪ ಪ್ರಶಸ್ತಿ, ಚಾವುಂಡರಾಯ ಪ್ರಶಸ್ತಿ, ಬಸವ ಪುರಸ್ಕಾರ ರಾಷ್ಟ್ರೀಯ ಸಮ್ಮಾನ, ಕೇಂದ್ರ ಸಾಹಿತ್ಯ ಅಕಾಡೆಮಿ ಭಾಷಾ ಸಮ್ಮಾನ, ರಾಷ್ಟ್ರಕವಿ ಎಂ ಗೋವಿಂದ ಪೈ ಪ್ರಶಸ್ತಿ, ಮೈಸೂರು ವಿವಿಯ ಗೌರವ ಡಾಕ್ಟರೇಟ್ ಇತ್ಯಾದಿ.
ಸಾಹಿತ್ಯ ಕೃತಿಗಳು : ನಾಟಕಾಮೃತ ಬಿಂದುಗಳು, ಭಾರತ ರೂಪಕ, ರಾಮಾಯಣ ನಾಟಕ ತ್ರಿವೇಣಿ, ಅಲ್ಲಮನ ವಚನ ಚಂದ್ರಿಕೆ, ಅಲ್ಲಮನ ವಚನಗಳು, ಬಸವಣ್ಣನವರ ವಚನಗಳು, ಸರ್ವಜ್ಞನ ವಚನಗಳು, ಅಕ್ಕನ ವಚನಗಳು, ದೇವರದಾಸಿಮಯ್ಯ ವಚನಗಳು, ಬಸವ ವಚನಾಮೃತ, ಪರಮಾರ್ಥ, ಶಿವದಾಸ ಗೀತಾಂಜಲಿ, ತಿರುಮಲಾರ್ಯ ಮತ್ತು ಚಿಕ್ಕದೇವರಾಜ ಒಡೆಯರು, ಶೃಂಗಾರ ನಿದರ್ಶನ, ಮಹಾದೇವನ ಮಹಾಲಿಂಗೇಂದ್ರ ವಿಜಯ, ಶಿವಗಣಪ್ರಸಾದಿ ಮಹಾದೇವಯ್ಯನ ಶೂನ್ಯ ಸಂಪಾದನೆ, ವೀರಶೈವ ತತ್ವ ಮತ್ತು ಆಚರಣೆ, ಕನ್ನಡ ಛಂದಸ್ಸಂಪುಟ, ಪಂಪನ ಆದಿ ಪುರಾಣ, ವಚನ ಚಿಂತನ, ಕಲುಬುರ್ಗಿಯ ಶರಣಬಸವ, ತೊರವೆ ರಾಮಾಯಣ ಸಂಗ್ರಹ, ಹರಹರನು ಕಂಡ ಜ್ಯೋತಿರ್ಲಿಂಗದ ಮೂರು ಮುಖಗಳು, ಶಬ್ದಮಣಿದರ್ಪಣ, ಶರಣ ಬಸವ ಸಂಪುಟ ಹಾಗೂ ಮುಂತಾದವು.
'ಕಲಿಯುವವರೆ ಕಲಿಸಲು ಯೋಗ್ಯರು', ಮಾನವ ಜಾತಿ ತಾನೊಂದೇ ವಲಂ'ಎಂಬುದರಲ್ಲಿ ನಂಬಿಕೆಯಿಟ್ಟಿದ್ದ 93 ರ ಹರೆಯ ಜ್ಞಾನವೃದ್ಧ ಎಲ್ ಬಿ ಅವರ ಚಿಂತನೆಗಳು ಸದಾ ಅನುಕರಣೀಯ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications