ಯೂನಿಕೋಡ್ ಬಳಕೆ : ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಂಬಾರ

ಡಾ.ಕಂಬಾರ ಅವರು ಜ. 30ರಂದು ಸೋಮವಾರ ಕಣಜ' ಅಂತರಜಾಲ ಕನ್ನಡ ಜ್ಞಾನಕೋಶದ ವತಿಯಿಂದ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಸಹಯೋಗದೊಡನೆ ಆಯೋಜಿಸಿದ್ದ 'ಕದಿರು' ಕಾಲೇಜು ವಿದ್ಯಾರ್ಥಿಗಳ ರಾಜ್ಯಮಟ್ಟದ ಲೇಖನ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಿ ಅವರು ಮಾತನಾಡುತ್ತಿದ್ದರು.
ಕುವೆಂಪು, ತೇಜಸ್ವಿ ಅವರು ಕನ್ನಡ ನಾಡು ನುಡಿಯ ಅಭಿವೃದ್ಧಿಗೆ ಮಾಹಿತಿ ತಂತ್ರಜ್ಞಾನದಲ್ಲಿ ಕನ್ನಡ ಬಳಕೆ ಬಗ್ಗೆ ಕಾಳಜಿ ವಹಿಸಿದ್ದರು. ಕಳೆದ ಏಳೆಂಟು ವರ್ಷಗಳಿಂದ ಕನ್ನಡ ಸಾಹಿತಿಗಳು, ತಜ್ಞರು ಈ ನಿಟ್ಟನಲ್ಲಿ ಪ್ರಯತ್ನ ನಡೆಸುತ್ತಲೇ ಇದ್ದಾರೆ. ಆದರೆ, ಸರಕಾರ ಮಾತ್ರ ಇನ್ನು ಕಲ್ಲಿನಂತೆ ನಿಶ್ಚಲವಾಗಿದೆ ಎಂದು ಸರಕಾರವನ್ನು ತರಾಟೆಗೆ ತೆಗೆದುಕೊಂಡರು.
ತಮಿಳುನಾಡು ಸರಕಾರ ಯೂನಿಕೋಡ್ ಬಳಕೆ ಬಗ್ಗೆ ಕಾಯಿದೆ ಕೂಡ ಮಾಡಿದೆ. ವಿಶ್ವ ಕನ್ನಡ ಸಮ್ಮೇಳನ ಸಂದರ್ಭದಲ್ಲಿ ಕನ್ನಡ ಯೂನಿಕೋಡ್ ಬಳಕೆ ಬಗ್ಗೆ ಸರಕಾರ ಭರವಸೆ ನೀಡಿತ್ತು. ಆದರೆ, ಸರಕಾರ ಕಾಳಜಿ ವಹಿಸುತ್ತಿಲ್ಲ ಎಂದ ಸಾಹಿತಿ ಡಾ.ಚಂದ್ರಶೇಖರ ಕಂಬಾರ ಅವರು ಇ-ಗವರ್ನನ್ಸ್ ಇಲಾಖೆಯ ಕಾರ್ಯವೈಖರಿ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಇದೇ ಸಂದರ್ಭದಲ್ಲಿ ದೇಶದ ಪ್ರತಿಷ್ಠಿತ ಮಾಹಿತಿ ತಂತ್ರಜ್ಞಾನ ಉನ್ನತ ಶಿಕ್ಷಣ ಸಂಸ್ಥೆಯಾದ ಇಂಟರನ್ಯಾಶನಲ್ ಇನ್ಸಿಟ್ಯೂಟ್ ಆಫ್ ಇನ್ಫಾರ್ಮೆಶನ್ ಟೆಕ್ನಾಲಾಜಿ (ಐಐಐಟಿ-ಬಿ) ವತಿಯಿಂದ ಪ್ರೊ.ಎಸ್.ಎಸ್.ಪ್ರಭು ಮತ್ತು ಪ್ರೊ.ಎಸ್.ರಾಜಗೋಪಾಲನ್ ಅವರು ಚಂದ್ರಶೇಖರ ಕಂಬಾರ ಅವರನ್ನು ಅಭಿನಂದಿಸಿದರು.
ಕಾಲೇಜು ವಿದ್ಯಾರ್ಥಿಗಳಿಗಳಲ್ಲಿ ಬರವಣಿಗೆ ಪ್ರೋತ್ಸಾಹಿಸುವ ಉದ್ದೇಶದಿಂದ ಕಣಜ ಅಂತರಜಾಲ ಕನ್ನಡ ಜ್ಞಾನಕೋಶ ಮತ್ತು ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಸಂಯುಕ್ತ ಆಶ್ರಯದಲ್ಲಿ ರಾಜ್ಯಮಟ್ಟದಲ್ಲಿ ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಲೇಖನ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ರಾಜ್ಯದ ವಿವಿಧ ಜಿಲ್ಲೆಗಳಿಂದ 750ಕ್ಕಿಂತ ಹೆಚ್ಚು ಮಂದಿ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications