ರೆಡ್ಡಿ ಆಸ್ತಿ ಜಾಲಾಡಲು ಬೆಂಗಳೂರಿಗೆ ಇಂದು ಸಿಬಿಐ ತಂಡ

ಕರ್ನಾಟಕದ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಯವರ ಮಾಲೀಕತ್ವದ ಸಂಸ್ಥೆಗಳು ವಿದೇಶಗಳಿಗೆ ಅಕ್ರಮವಾಗಿ ವರ್ಗಾಯಿಸಿರುವ ಭಾರಿ ಪ್ರಮಾಣದ ಹಣವನ್ನು ಪತ್ತೆ ಹಚ್ಚಲು ಫೆಬ್ರವರಿ ಮೊದಲ ವಾರ ಕೆಲವು ವಿದೇಶಗಳಿಗೆ ಈ ಸಿಬಿಐ ತಂಡ ಭೇಟಿ ನೀಡಲಿದೆ. ರೆಡ್ಡಿ ಹಾಗೂ ಅವರ ಸಹೋದರರು ಮಾರಿಷಸ್ ಹಾಗೂ ವರ್ಜಿನ್ ದ್ವೀಪ ಸಹಿತ ವಿದೇಶಗಳಲ್ಲಿ 6 ಕಂಪನಿಗಳನ್ನು ಹೊಂದಿದ್ದಾರೆಂದು ಸಿಬಿಐ ತನಿಖೆಯಿಂದ ತಿಳಿದು ಬಂದಿದೆ. ಕಬ್ಬಿಣದ ಅದಿರು ರಫ್ತಿಗಾಗಿ ಚೀನಾದ ಸಂಸ್ಥೆಗಳು ಪಾವತಿಸಿದ ಹಣವನ್ನು ಈ ಕಂಪನಿಗಳಿಗೆ ವರ್ಗಾಯಿಸಲಾಗಿದೆ.
ರೆಡ್ಡಿ ಆಸ್ತಿ ಜಾಲಾಡಲು ಬೆಂಗಳೂರಿಗೆ ಸಿಬಿಐ ತಂಡ: ಈ ಮಧ್ಯೆ, ಸೆಪ್ಟೆಂಬರಿನಲ್ಲಿ ರೆಡ್ಡಿಯನ್ನು ಬಂಧಿಸಿದ ವೇಳೆ ಸಿಬಿಐ ತಂಡ ಬೆಂಗಳೂರಿನಲ್ಲಿಯೂ ರೆಡ್ಡಿಗೆ ಸೇರಿದ ಆಸ್ತಿಪಾಸ್ತಿಯನ್ನು ಜಪ್ತಿ ಮಾಡಿತ್ತು. ಜತೆಗೆ ಬಳ್ಳಾರಿಯಲ್ಲಿ ವಶಪಡಿಸಿಕೊಂಡಿದ್ದ ರೆಡ್ಡಿಯ ರುಕ್ಮಿಣಿ ಹೆಲಿಕಾಪ್ಟರ್ ಅನ್ನು ಯಲಹಂಕದಲ್ಲಿರುವ ಡೆಕ್ಕನ್ ವಾಯುಯಾನ ಸಂಸ್ಥೆಯ ಸುಪರ್ದಿಗೆ ಒಪ್ಪಿಸಿತ್ತು. ಇವರೆಡನ್ನು ಕೋರ್ಟ್ ಅಧಿಕಾರಿಗಳ ಸಮ್ಮುಖದಲ್ಲಿ ಪರಿಶೀಲಿಸಲು ಸಿಬಿಐ ತಂಡ ಇಂದು (ಜನವರಿ 30) ಬೆಂಗಳೂರಿಗೆ ಆಗಮಿಸಲಿದೆ. ಸಿಬಿಐ ಹೈದ್ರಾಬಾದ್ ಬ್ರಾಂಚಿನ ಹೆಚ್ಚುವರಿ ಎಸ್ಪಿ ಆರ್.ಎಂ. ಖಾನ್ ಮತ್ತು ನ್ಯಾಯಾಲಯದ ಸಿಬ್ಬಂದಿ ಲಕ್ಷ್ಮೀ ರೆಡ್ಡಿ ಮೊದಲಾದ ಅಧಿಕಾರಿಗಳು ತಂಡದಲ್ಲಿದ್ದಾರೆ.
ಬಳ್ಳಾರಿಯಲ್ಲಿ ಜಾಲಾಡಿದ ಸಿಬಿಐ: ಈ ಮಧ್ಯೆ ಅಕ್ರಮ ಗಣಿಗಾರಿಕೆ ಪ್ರಕರಣದ ತನಿಖೆ ನಡೆಸಿ ಈಗಾಗಲೇ ಆರೋಪ ಪಟ್ಟಿ ಸಲ್ಲಿಸಿದ ಹೈದರಾಬಾದ್ ಸಿಬಿಐನ ಅಧಿಕಾರಿಗಳ ತಂಡ ಸತತ ಎರಡನೇ ದಿನವೂ (ಭಾನುವಾರ) ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ನಿವಾಸದಲ್ಲಿ ಪರಿಶೀಲನೆ ನಡೆಸಿತು. ರೆಡ್ಡಿ ವಿರುದ್ಧ ಚಾರ್ಜಶೀಟ್ನಲ್ಲಿ ಹೆಸರಿಸಲಾಗಿರುವ ಆಸ್ತಿ ಪಾಸ್ತಿಗಳ ಕುರಿತು ಮತ್ತಷ್ಟು ವಿವರಗಳನ್ನು ತಂಡ ಪಡೆದುಕೊಂಡಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications