ಎಮ್ಮಾರ್ ಟೌನ್ಶಿಪ್ ಹಗರಣ ಕಾಂಗ್ರೆಸಿನ ಪಾಪದ ಕೂಸು

ಅಸಲಿಗೆ ಇದು ಕಾಂಗ್ರೆಸ್ ಪಕ್ಷದ ಪಾಪದ ಕೂಸು. ಕಾಂಗ್ರೆಸ್ ಪಕ್ಷದ ರಾಜ್ಯಸಭಾ ಸದಸ್ಯ ಕೆವಿಪಿ ರಾಮಚಂದ್ರ ರಾವ್ ಹಗರಣದ ರೂವಾರಿ. ಇನ್ನು, ಈಗಿನ ವೈಎಸ್ಆರ್ ಕಾಂಗ್ರೆಸ್ ನ ಅಧಿನಾಯಕ ಜಗನ್ ಮೋಹನ್ ರೆಡ್ಡಿ ಸಹ ಈ ಅಕ್ರಮದಲ್ಲಿ ಪರೋಕ್ಷವಾಗಿ ಭಾಗಿ.
2005-2009ರ ನಡುವಣ ಅವಧಿಯಲ್ಲಿ ಈ ಅಕ್ರಮ ನಡೆದಿತ್ತು. ದುಬೈನ ಎಮ್ಮಾರ್ ನಿರ್ಮಾಣ ಸಂಸ್ಥೆ ಟೌನ್ಶಿಪ್ ಅಭಿವೃದ್ಧಿಪಡಿಸಿತ್ತು. ಹೈದರಾಬಾದಿನ ಗಚಿಬೌಲಿ ಪ್ರದೇಶದಲ್ಲಿ ಕೈಗಾರಿಕಾ ಮೂಲ ಸೌಕರ್ಯ ಅಭಿವೃದ್ಧಿ ನಿಗಮವು (APPIC) ರೈತರಿಂದ 535 ಎಕರೆ ಕಿತ್ತುಕೊಂಡು ಈ ಟೌನ್ ಶಿಪ್ ನಿರ್ಮಾಣವಾಗಿತ್ತು.
ಪ್ರಸ್ತುತ ಸಿಬಿಐಗೆ ಮಾಫಿ ಸಾಕ್ಷಿಯಾಗಲು ಹವಣಿಸುತ್ತಿರುವ ಪ್ರಕರಣದ ಆರೋಪಿ, ದಲ್ಲಾಳಿ ಕೋನೇರು ಪ್ರಸಾದ್ ದಾಖಲೆ ಪತ್ರಗಳ ಮೇಲೆ ಕಡಿಮೆ ಬೆಲೆ ತೋರಿಸಿ, ಭಾರಿ ಮೊತ್ತಕ್ಕೆ ಗಣ್ಯಾತಿಗಣ್ಯ ವ್ಯಕ್ತಿಗಳಿಗೆ ನಿವೇಶನಗಳನ್ನು ಮಾರಾಟ ಮಾಡಿದ್ದರು. ಇದರಿಂದ ಸರಕಾರದ ಬೊಕ್ಕಸಕ್ಕೆ ಅಪಾರ ಪ್ರಮಾಣದ ನಷ್ಟವುಂಟಾಗಿತ್ತು.
ಆಂಧ್ರ ಹೈಕೋರ್ಟ್ ಕಳೆದ ವರ್ಷ ಆಗಸ್ಟ್ ನಲ್ಲಿ ಸಿಬಿಐ ತನಿಖೆಗೆ ಒಪ್ಪಿಸಿತ್ತು. ಕುತೂಹಲದ ಸಂಗತಿಯೆಂದರೆ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಕೆಲ ಶಾಸಕರು ಮತ್ತು ಟಿಡಿಪಿ ಶಾಸಕರು ಪ್ರಕರಣವನ್ನು ಸಿಬಿಐಗೆ ಒಪ್ಪಿಸುವಂತೆ ಕೋರ್ಟ್ ಮೊರೆ ಹೋಗಿದ್ದರು.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications