ಜನಶ್ರೀ ಟಿವಿ ಮೇಲೆ ಸಿಟ್ಟಿಗೆದ್ದ ಶಾಸಕ ಸಿಟಿ ರವಿ

ನನ್ನ ಘನತೆಗೆ ಚ್ಯುತಿ ಉಂಟು ಮಾಡಿ, ಶಾಸಕರಾಗಿ ಕರ್ತವ್ಯ ನಿರ್ವಹಿಸಲು ತೊಂದರೆಯಾಗುವ ರೀತಿಯಲ್ಲಿ ಮೂರು ದಿನಗಳ ಕಾಲ ಜನಶ್ರೀ ಸುದ್ದಿವಾಹಿನಿ ಸುದ್ದಿ ಪ್ರಸಾರ ಮಾಡಿದೆ. ಮಾಹಿತಿಯ ಸತ್ಯಾಸತ್ಯತೆಯ ಬಗ್ಗೆ ತನಿಖೆ ನಡೆಸುವುದು ಹಾಗಿರಲಿ. ಕನಿಷ್ಠಪಕ್ಷ ನನ್ನ ಅಭಿಪ್ರಾಯವನ್ನಾದರೂ ಕೇಳಬಹುದಿತ್ತು.
ಶಾಸಕನಾಗಿ ಕರ್ತವ್ಯ ನಿರ್ವಹಿಸದಂತೆ ಭಯ ಸೃಷ್ಟಿಸುವ ಮೂಲಕ ಮಾನಹಾನಿ ಮಾಡಿರುವ ಸುದ್ದಿ ವಾಹಿನಿ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ನನ್ನ ಬಳಿ ಈ ಸಂಚಿನ ಹಿಂದೆ ಯಾರಿದ್ದಾರೆ ಎಂಬುದಕ್ಕೆ ದಾಖಲೆಗಳಿವೆ ಎಂದು ಸ್ಪೀಕರ್ ಕೆಜಿ ಬೋಪಯ್ಯ ಅವರಿಗೆ ಮನವಿ ಸಲ್ಲಿಸಿದರು. ಚಿಕ್ಕಮಗಳೂರು ಶಾಸಕ ಸಿ.ಟಿ.ರವಿ ಸಲ್ಲಿಸಿರುವ ದೂರನ್ನು ಸ್ಪೀಕರ್ ಕೆ.ಜಿ.ಬೋಪಯ್ಯ ಸದನದ ಹಕ್ಕುಚ್ಯುತಿ ಸಮಿತಿಗೆ ಒಪ್ಪಿಸಿದ್ದಾರೆ.
ಆದರೆ, ಈ ಸಂದರ್ಭದಲ್ಲಿ ಸುದ್ದಿ ವಾಹಿನಿ ವಿರುದ್ಧ ಹಕ್ಕುಚ್ಯುತಿ ಮಂಡಿಸಲು ಜೆಡಿಎಸ್ ಶಾಸಕಾಂಗ ನಾಯಕ ಎಚ್.ಡಿ.ರೇವಣ್ಣ, ವಿರೋಧಿಸಿ 'ಇದು ಅಭಿವ್ಯಕ್ತಿ ಸ್ವಾತಂತ್ರ್ಯ ಹರಣವಾಗುತ್ತದೆ' ಎಂದರು.
ಆದರೆ ಕಾಂಗ್ರೆಸ್ನ ಡಾ.ಎಂ.ಸಿ.ಸುಧಾಕರ್ ಹಾಗೂ ಅವರು ಕಾನೂನು ಸಚಿವ ಸುರೇಶ್ಕುಮಾರ್ ರವಿಯವರನ್ನು ಬೆಂಬಲಿಸಿದರು. ನಂತರ ಸ್ಪೀಕರ್ ದೂರನ್ನು ಸಮಿತಿಗೆ ವರ್ಗಾಯಿಸಿರುವುದಾಗಿ ಪ್ರಕಟಿಸಿದರು. ಶಾಸಕ ಸಿಟಿ ರವಿ ಹಾಗೂ ಅವರ ಪತ್ನಿ ವಿರುದ್ಧ ಸಿಎ ಸೈಟ್ ಗಿಟ್ಟಿಸಿಕೊಂಡ ಆರೋಪ ಹೊರೆಸಿ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications