ಕೋರ್ಟ್ ತೀರ್ಪು:ಪಳನಿಯಪ್ಪನ್ ಚಿದಂಬರಂ ಬಚಾವು

2ಜಿ ಹಗರಣದಲ್ಲಿ ಚಿದಂಬರಂ ಪಾತ್ರದ ಕುರಿತು ವಿಚಾರಣಾ ನ್ಯಾಯಾಲಯವೇ ತೀರ್ಪು ನೀಡುವುದು ಒಳಿತು ಎಂದು ಸುಪ್ರೀಮ್ ಕೋರ್ಟ್ ಉತ್ತಮ ವಿವೇಚನೆಯಿಂದ ಹೇಳಿದೆಯಾದರೂ ಅದರ ಜತೆ ಜತೆಗೆ ನ್ಯಾ ಸೈನಿ ನೀಡಬಹುದಾದ ತೀರ್ಪಿನ ಬಗ್ಗೆಯೂ ಕಾಮೆಂಟ್ ಮಾಡಿದೆ. ಅಷ್ಟೇ ಅಲ್ಲ. ಪ್ರಧಾನಿ ಸಿಂಗ್ ಆಗಲಿ ಅಥವಾ ಗೃಹ ಸಚಿವ ಚಿದಂಬರಂ ಅವರನ್ನಾಗಲಿ ಹಗರಣಕ್ಕೆ ಹೊಣೆಯಾಗಿಸಲಾಗದು ಎಂದೂ ಸುಪ್ರೀಂ ಅಭಿಪ್ರಾಯಪಟ್ಟಿದೆ.
ಸುಪ್ರೀಂ ಅಭಿಪ್ರಾಯವೇ ಹೀಗಿರುವಾಗ ಅಧೀನ ನ್ಯಾಯಾಧೀಶ ನ್ಯಾ ಸೂನಿ ಅವರು ತಾನೇ ಏನು ಹೇಳಿಯಾರು!? ಕುತೂಹಲದ ಸಂಗತಿಯೆಂದರೆ ಸುಪ್ರೀಂ ನ್ಯಾಯಪೀಠಕ್ಕೆ ತನ್ನ ತೀರ್ಪು ಅಧೀನ ನ್ಯಾಯಾಲಯದ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ ಎಂಬುದು ಅರಿವೆಗೆ ಬಂದಿದೆ. ಅದಕ್ಕೆ ತಕ್ಷಣ ಚಿದಂಬರಂ ವಿಚಾರಣೆ ಕುರಿತು ನಿರ್ಧರಿಸುವ ವೇಳೆ ಸುಪ್ರೀಂಕೋರ್ಟ್ ತೀರ್ಪಿನಿಂದ ಪ್ರಭಾವಿತವಾಗದಂತೆಯೂ ನ್ಯಾಯಮೂರ್ತಿಗಳಾದ ಜಿ.ಎಸ್. ಸಿಂಘ್ವಿ ಮತ್ತು ಎ.ಕೆ.ಗಂಗೂಲಿ ಸಲಹೆ ನೀಡಿದ್ದಾರೆ!
ನ್ಯಾ ಸೈನಿ ಅವರೂ ಸುಪ್ರೀಮ್ ಕೋರ್ಟಿನಿಂದ ಇಂತಹುದನ್ನು ಬಯಸಿದ್ದರು ಎಂದು ಕಾಣುತ್ತದೆ. ಅದಕ್ಕೇ ಸ್ವಾಮಿ ಅರ್ಜಿ ವಿಚಾರಣೆಯನ್ನು 21ಕ್ಕೆ ಪೂರ್ಣಗೊಳಿಸಿದ್ದರೂ ತೀರ್ಪನ್ನು ಫೆ. 4ಕ್ಕೆ ಕಾಯ್ದಿರಿಸಿದ್ದರು. ಏಕೆಂದರೆ ಫೆ. 2ಕ್ಕೆ ಸುಪ್ರೀಮ್ ಕೋರ್ಟ್ ಮಹತ್ವದ ತೀರ್ಪು ನೀಡುವುದು ನಿಕ್ಕಿಯಾಗಿತ್ತು. ಹಾಗೆಂದ ಮಾತ್ರಕ್ಕೆ ಸುಪ್ರೀಮ್ ಕೊರ್ಟ್ ತೀರ್ಪಿನಲ್ಲಿ ಹುಳುಕು ಕಾಣುವ ಪ್ರಯತ್ನ ಇದಲ್ಲ. ಆದರೂ ಪರೋಕ್ಷವಾಗಿ ಏನು ಪ್ರಭಾವ ಬೀರಲಿದೆಯೋ ಎಂಬ ಆತಂಕ ಮನೆ ಮಾಡಿದೆ ಎನ್ನುತ್ತಾರೆ ಬೆಂಗಳೂರಿನ ನುರಿತ ವಕೀಲರೊಬ್ಬರು.
ಸೋ, ನ್ಯಾ ಸೈನಿ ಅವರು ಎಷ್ಟರ ಮಟ್ಟಿಗೆ ಪ್ರಭಾವಿತರಾಗುತ್ತಾರೆ ಎಂಬುದಕ್ಕೆ ಇನ್ನೇನು ಕೆಲವೇ ಗಂಟೆಗಳಲ್ಲಿ ಉತ್ತರ ಸಿಗಲಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications