ಮಾಧವನ್ ನಾಯರ್ ಆರೋಪಿ:ಸಿವಿಸಿ ವರದಿ

ಇಸ್ರೋದ ಮಾಜಿ ಅಧ್ಯಕ್ಷ ಮಾಧವನ್ ನಾಯರ್ ಹಾಗೂ ಇತರ ಮೂವರು ಹಿರಿಯ ವಿಜ್ಞಾನಿಗಳು ಹೊಣೆಗಾರರಾಗಿದ್ದಾರೆ ಎಂದು ಹಗರಣದ ಬಗ್ಗೆ ತನಿಖೆ ನಡೆಸಿರುವ ಪ್ರತ್ಯೂಷ್ ಸಿನ್ಹಾ ನೇತೃತ್ವದ ಐವರು ಸದಸ್ಯರ ತಂಡವು ತೀರ್ಮಾನಿಸಿದೆ.
ಇಸ್ರೋದ ಮಾಜಿ ವೈಜ್ಞಾನಿಕ ಕಾರ್ಯದರ್ಶಿ ಎ. ಭಾಸ್ಕರ ನಾರಾಯಣ, ಅಂತರಿಕ್ಷ್ ಮಾಜಿ ಕಾರ್ಯಕಾರಿ ನಿರ್ದೇಶಕ ಕೆ.ಆರ್.ಶ್ರೀಧರ ಮೂರ್ತಿ ಹಾಗೂ ಇಸ್ರೋ ಉಪಗ್ರಹ ಕೇಂದ್ರದ ಮಾಜಿ ನಿರ್ದೇಶಕ ಕೆ.ಎನ್. ಶಂಕರ್ ದೋಷಿಗಳೆಂದು ವರದಿಯಲ್ಲಿ ಸೂಚಿಸಲಾಗಿದೆ.
2005ರಲ್ಲಿ ಇಸ್ರೋದ ವಾಣಿಜ್ಯ ಘಟಕವಾದ ಅಂತರಿಕ್ಷ್ ಎರಡು ಉಪಗ್ರಹಗಳನ್ನು ನಿರ್ಮಿಸಿ, ಅವುಗಳನ್ನು ವಾಣಿಜ್ಯ ಬ್ರಾಂಡ್ಬ್ಯಾಂಡ್ ಸೇವೆಗಳನ್ನು ನೀಡುವ ದೇವಾಸ್ ಸಂಸ್ಥೆಗೆ ಎಸ್-ಬ್ಯಾಂಡ್ ತರಂಗಗುಚ್ಛಗಳ ಪ್ರಸಾರಕ್ಕಾಗಿ ನೀಡುವ ಬಗ್ಗೆ ಒಪ್ಪಂದ ಮಾಡಿಕೊಂಡಿತ್ತು.
ಇದಕ್ಕಾಗಿ ದೇವಾಸ್ 1000 ಕೋಟಿ ರೂ.ಗಳನ್ನು ಪಾವತಿಸುವಂತೆಯೂ ಅಂತರಿಕ್ಷ್ ಸೂಚಿಸಿತ್ತು. ಆದರೆ ಈ ಒಪ್ಪಂದ ಕಾರ್ಯಗತಗೊಂಡಲ್ಲಿ ಸರಕಾರಕ್ಕೆ 2 ಲಕ್ಷ ಕೋಟಿ ರೂ. ವರೆಗೂ ಭಾರೀ ನಷ್ಟ ಉಂಟಾಗಬಹುದಿತ್ತು.
ಮಾಧ್ಯಮಗಳು ಈ ಒಪ್ಪಂದದ ಹಿಂದೆ ಭಾರೀ ದೊಡ್ಡ ಭ್ರಷ್ಟಾಚಾರ ನಡೆದಿರುವುದಾಗಿ ವರದಿಗಳನ್ನು ಪ್ರಕಟಿಸಿದ ಬಳಿಕ ವಿವಾದ ಬೆಳಕಿಗೆ ಬಂದಿತ್ತು. ಇಸ್ರೋ ತನ್ನ ವೆಬ್ಸೈಟ್ನಲ್ಲಿ ಸಿನ್ಹಾ ಸಮಿತಿಯ ವರದಿಯ ನಿರ್ಣಯ ಹಾಗೂ ಶಿಫಾರಸುಗಳನ್ನು ಪ್ರಸಾರ ಮಾಡಿದೆ.
ಮಾಧವನ್ ನಾಯರ್ ಸೇರಿದಂತೆ ಆರೋಪಿಗಳ ವಿರುದ್ಧ ಪಿಂಚಣಿ ಕಾನೂನುಗಳು ಹಾಗೂ ಇತರ ಕಾನೂನು ನಿಯಮಗಳ ಕುರಿತಾದ ಪ್ರಚಲಿತ ಸೆಕ್ಷನ್ಗಳಡಿ ಶಿಸ್ತುಕ್ರಮ ಕೈಗೊಳ್ಳಬೇಕೆಂದು ಶಿಫಾರಸು ಮಾಡಲಾಗಿದೆ.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications