ಚಾರಣ: ಕಾಲೇಜು ವಿದ್ಯಾರ್ಥಿ ನವೀನ್ ಶವ ಪತ್ತೆ

ಕಬ್ಬಿನಾಲೆ ಫಾಲ್ಸ್(ಕುತ್ತಿಚೆಟ್ಟಾ ಫಾಲ್ಸ್) ಅಥವಾ ಅಡ್ಡಹೊಳೆಯಲ್ಲಿ ಈಜಲು ಹೋಗಿ ಮೃತಪಟ್ಟಿದ್ದಾನೆ ಎನ್ನಲಾದ ವಿದ್ಯಾರ್ಥಿಯನ್ನು ನವೀನ್ ಕುಮಾರ್(22) ಎಂದು ಗುರುತಿಸಲಾಗಿದೆ. ಎರಡು ದಿನ ಕಳೆದರೂ ಮೃತ ನವೀನ್ ಶವ ಇನ್ನೂ ಪತ್ತೆಯಾಗಿರಲಿಲ್ಲ.
ಮಂಗಳೂರಿನಿಂದ ಸ್ಕ್ಯೂ ಡೈವರ್ಸ್ ಗಳನ್ನು ಕರೆಸಿಕೊಳ್ಳಲಾಗುತ್ತಿದ್ದು, ಶೋಧ ಕಾರ್ಯ ಮುಂದುವರೆಯಲಿದೆ ಎಂದು ಸಕಲೇಶಪುರ ಗ್ರಾಮಾಂತರ ಪೊಲೀಸರು ಹೇಳಿದ್ದಾರೆ. ಅರಣ್ಯ ಇಲಾಖೆ ಸೂಚನೆ ಮೇರೆಗೆ ನಮ್ಮ ಪ್ರಯತ್ನ ಮಾಡುತ್ತಿದ್ದೇವೆ. ವಿದ್ಯಾರ್ಥಿಗಳ ಮನೆಯವರಿಗೆ ವಿಷಯ ತಿಳಿಸಿದ್ದೇವೆ ಎಂದು ಸಕಲೇಶಪುರ ಡಿವೈಎಸ್ಪಿ ಉಪೇಂದ್ರ ಕುಮಾರ್ ಹೇಳಿದ್ದಾರೆ.
ಬೆಂಗಳೂರಿನ ಬಿ.ಎಂ.ಎಸ್.ಇಂಜಿನಿಯರಿಂಗ್ ಕಾಲೇಜಿನಲ್ಲಿ 6ನೇ ಸೆಮಿಸ್ಟರ್ನಲ್ಲಿ ವ್ಯಾಸಂಗ ಮಾಡುತ್ತಿರುವ ಈ ವಿದ್ಯಾರ್ಥಿಗಳು ರಕ್ಷಿತಾರಣ್ಯ ಪ್ರದೇಶದಲ್ಲಿ ಅನುಮತಿ ಇಲ್ಲದೆ ತಿರುಗಾಟ ಮಾಡಿದ ಪರಿಣಾಮವಾಗಿ ತೊಂದರೆ ಅನುಭವಿಸಬೇಕಾಗಿದೆ.
ಅರಣ್ಯ ಕಾಯ್ದೆ ಉಲ್ಲಂಘನೆ ಮಾಡಿ, ರಕ್ಷಿತಾರಣ್ಯದಲ್ಲಿ ಅತಿಕ್ರಮ ಪ್ರವೇಶ ಮಾಡಿರುವ ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲಿಸಲಾಗಿದೆ. ಎಲ್ಲರನ್ನೂ ಸಕಲೇಶಪುರದ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.
ನವೀನ್ ಕುಮಾರ್ ಸಾವು, ಶವ ಕಾಣೆ ಹೇಗಾಯ್ತು?












Click it and Unblock the Notifications