ರೇವ್ ಪಾರ್ಟಿ ವಿರುದ್ಧ ಸಿಡಿದೆದ್ದ ಉಡುಪಿ ಜನತೆ

'ಸ್ಪ್ರಿಂಗ್ ಝೂಕ್" ಅಂತಾರಾಷ್ಟ್ರೀಯ ಉತ್ಸವ ಬಹಳಷ್ಟು ವಿವಾದಕ್ಕೆ ಕಾರಣವಾಗಿದ್ದು, ಅಲ್ಲಿ ವಿದೇಶಿ ಪ್ರವಾಸಿಗರು ಮುಕ್ತವಾಗಿ ನಡೆಸಿದ ಕಾಮಕೇಳಿ, ಅಶ್ಲೀಲ ವೀಡಿಯೊ ತುಣುಕುಗಳು ಇದೀಗ ಬಹಿರಂಗಗೊಂಡಿವೆ. ಮಾಧ್ಯಮಗಳಿಗೆ ಲಭ್ಯವಾಗಿರುವ ವೀಡಿಯೊದಲ್ಲಿ ಸಂಗೀತ ಕಾರ್ಯಕ್ರಮ ನಡೆಯುತ್ತಿದ್ದ ವೇದಿಕೆಯಲ್ಲಿಯೇ ವಿದೇಶಿ ಜೋಡಿಯೊಂದು ಮುಕ್ತವಾಗಿ ಕಾಮಕೇಳಿ ನಡೆಸಿ ಅಸಭ್ಯವಾಗಿ ವರ್ತಿಸುತ್ತಿರುವ ದೃಶ್ಯಗಳಿವೆ.
ನಾಗರಿಕ ಸಮಿತಿ ಪ್ರತಿಭಟನೆ: ಮಲ್ಪೆ ಸೈಂಟ್ ಮೇರಿಸ್ ದ್ವೀಪದಲ್ಲಿ ನಡೆದ ರೇವ್ ಪಾರ್ಟಿಯಲ್ಲಿ ಅಶ್ಲೀಲತೆ, ಅಸಭ್ಯ ವರ್ತನೆಯನ್ನು ಖಂಡಿಸಿ ಉಡುಪಿ ಜಿಲ್ಲಾ ನಾಗರಿಕ ಸಮಿತಿಯು ಸೋಮವಾರ ಉಡುಪಿಯಲ್ಲಿ ಪ್ರತಿಭಟನೆ ನಡೆಸಿತು. ನಗರದ ಸಂಸ್ಕೃತ ಕಾಲೇಜಿನಿಂದ ಹೊರಟ ಪ್ರತಿಭಟನಾ ಮೆರವಣಿಗೆ ಕನಕದಾಸ ರಸ್ತೆಯಿಂದ ರಥಬೀದಿಗೆ ಆಗಮಿಸಿ, ಶ್ರೀಕೃಷ್ಣಮಠದ ಮಂದೆ ಸಾಗಿತು. ಬಳಿಕ ರಥಬೀದಿಯಲ್ಲಿ ಪ್ರತಿಭಟನೆ ನಡೆಸಿ, ರೇವು ಪಾರ್ಟಿಗೆ ಅವಕಾಶ ಕಲ್ಪಿಸಿದ ಜಿಲ್ಲಾಡಳಿತದ ಕ್ರಮವನ್ನು ಖಂಡಿಸಲಾಯಿತು.
ಅಶ್ಲೀಲವಾಗಿ ಬಟ್ಟೆ ಧರಿಸಿದ್ದ ಗೊಂಬೆಯನ್ನು ಮೆರವಣಿಗೆಯಲ್ಲಿ ಪ್ರದರ್ಶಿಸಿ, ಬಳಿಕ ಅದಕ್ಕೆ ಭಾರತೀಯ ಸಂಸ್ಕೃತಿಯಂತೆ ಸೀರೆ, ಕುಂಕುಮ, ಬಳೆಗಳನ್ನು ತೊಡಿಸಲಾಯಿತು. ಭಾರತೀಯ ಸಂಸ್ಕೃತಿಯನ್ನು ಉಳಿಸುವಂತೆ ಹಾಗೂ ವಿದೇಶಿ ಸಂಸ್ಕೃತಿಯನ್ನು ವಿರೋಧಿಸುವಂತೆ ಪ್ರತಿಭಟನ ಕಾರರು ಘೋಷಣೆಗಳನ್ನು ಕೂಗಿದರು. ಇದರಲ್ಲಿ ಹರೇ ಕೃಷ್ಣ ಸಂಸ್ಥೆಯ ವಿದೇಶಿ ಮಹಿಳೆಯರು ಕೂಡ ಪಾಲ್ಗೊಂಡರು. ಪ್ರತಿಭಟನೆಯಲ್ಲಿ ನಾಗರಿಕ ಸಮಿತಿಯ ಪ್ರಧಾನ ಕಾರ್ಯದರ್ಶಿ ನಿತ್ಯಾನಂದ, ರಮಾದೇವಿ, ಪ್ರಭಾ ಶೆಟ್ಟಿ, ಗಣೇಶ್ರಾಜ್ ಸರಳಬೆಟ್ಟು, ಶೈಲಾ ರೈ, ಶಾಂತಿ ಮೊದಲಾದವರು ಉಪಸ್ಥಿತರಿದ್ದರು.
ಶಿರೂರು ಸ್ವಾಮೀಜಿ ಆಕ್ಷೇಪ: ರಮಣೀಯ ಹಾಗೂ ಪವಿತ್ರವಾದ ಸೈಂಟ್ ಮೇರಿಸ್ ದ್ವೀಪವನ್ನು ಉತ್ಸವದ ಹೆಸರಿನಲ್ಲಿ ಹಾಳು ಮಾಡಲಾಗುತ್ತಿದೆ. ಹಣ ಮಾಡುವ ದುರಾಲೋಚನೆಯಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದು ವಿಷಾದನೀಯ ಎಂದು ಶಿರೂರು ಮಠಾಧೀಶ ಶ್ರೀಲಕ್ಷ್ಮೀವರ ತೀರ್ಥ ಸ್ವಾಮೀಜಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಧ್ಯಮಗಳಲ್ಲಿ ಈ ವಿಷಯ ತಿಳಿದು ಅಲ್ಲಿನ ವಾಸ್ತವಾಂಶ ತಿಳಿಯಲು ನಿನ್ನೆ ಸೈಂಟ್ ಮೇರಿಸ್ ದ್ವೀಪಕ್ಕೆ ತೆರಳಿದ್ದೆ. ಆ ಸಂದರ್ಭದಲ್ಲಿ ಅಲ್ಲಿ ಉಪಸ್ಥಿತರಿದ್ದ ಜಿಲ್ಲಾಧಿಕಾರಿ ಹಾಗೂ ಶಾಸಕ ರಘುಪತಿ ಭಟ್ ಅವರಲ್ಲಿ ಈ ಅವ್ಯವಸ್ಥೆಯ ಬಗ್ಗೆ ಬೇಸರ ವ್ಯಕ್ತಪಡಿಸಿದ್ದೆ. ಜಿಲ್ಲಾಧಿಕಾರಿಗೆ ತನ್ನ ತಪ್ಪಿನ ಬಗ್ಗೆ ಅರಿವಾಗಿರುವುದನ್ನು ಅವರು ಹೇಳಿಕೊಂಡರು ಎಂದರು.
ಗೋಕರ್ಣ, ಹಂಪಿ ಈಗಾಗಲೇ ವಿದೇಶಿಯ ರಿಂದ ಹಾಳಾಗಿದೆ. ಆದರೆ ಈ ಸ್ಥಳ ಹಾಳಾಗ ಬಾರದು. ಉಡುಪಿ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರು ದ್ವೀಪಕ್ಕೆ ಭೇಟಿ ನೀಡುವುದರಿಂದ ಅಲ್ಲಿ ಅಶ್ಲೀಲತೆಗೆ ಅವಕಾಶ ಕೊಡಬಾರದು ಎಂದು ಶಿರೂರು ಸ್ವಾಮೀಜಿ ತಿಳಿಸಿದರು.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications